ರಶ್ಮಿಕಾ -ವಿಜಯ್ ದೇವರಕೊಂಡ 
ಸಿನಿಮಾ ಸುದ್ದಿ

ಮಾರ್ಚ್ 4ರಂದು ರಶ್ಮಿಕಾ-ವಿಜಯ್ ಆರತಕ್ಷತೆ: ಶಿವಣ್ಣ, ಸುದೀಪ್‌ ಸೇರಿ ಕನ್ನಡ ಚಿತ್ರರಂಗದ 11ಮಂದಿಗಷ್ಟೇ ಆಮಂತ್ರಣ

ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ರಿಸೆಪ್ಷನ್‌ಗೆ ಕನ್ನಡದ ಕೆಲವು ಸ್ಟಾರ್‌ಗಳಿಗೆ ಮಾತ್ರ ಆಹ್ವಾನ ಪತ್ರಿಕೆ ತಲುಪಿಸಲಾಗಿದೆ. ರಶ್ಮಿಕಾ ಸ್ವತಃ ವೈಯಕ್ತಿಕವಾಗಿ ಮೆಸೇಜ್ ಮಾಡಿ ಆಮಂತ್ರಣ ನೀಡಿರುವುದು ವಿಶೇಷವಾಗಿದೆ.

ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ವಿವಾಹ ಉದಯಪುರದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿದೆ. ಈ ಮಧ್ಯೆ ಕನ್ನಡದ ಯಾವ ನಟರಿಗೆ ರಶ್ಮಿಕಾ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ ಅನ್ನೋ ಕುತೂಹಲ ಹಲವರಲ್ಲಿದೆ.

ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ರಿಸೆಪ್ಷನ್‌ಗೆ ಕನ್ನಡದ ಕೆಲವು ಸ್ಟಾರ್‌ಗಳಿಗೆ ಮಾತ್ರ ಆಹ್ವಾನ ಪತ್ರಿಕೆ ತಲುಪಿಸಲಾಗಿದೆ. ರಶ್ಮಿಕಾ ಸ್ವತಃ ವೈಯಕ್ತಿಕವಾಗಿ ಮೆಸೇಜ್ ಮಾಡಿ ಆಮಂತ್ರಣ ನೀಡಿರುವುದು ವಿಶೇಷವಾಗಿದೆ. ಸ್ಯಾಂಡಲ್​​ವುಡ್​​ ಬಹು ಬೇಡಿಕೆ ನಟರಿಗೆ ಮಾತ್ರ ಮದುವೆ ಆಹ್ವಾನ ಪತ್ರಿಕೆ ನೀಡಿರುವುದು ಇದೀಗ ಸ್ಯಾಂಡಲ್​ವುಡ್​​ನಲ್ಲಿ ಹಲವು ಚರ್ಚೆಗೂ ಕಾರಣವಾಗಿದೆ.

ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರವಿಚಂದ್ರನ್, ಧ್ರುವ ಸರ್ಜಾ, ಗಣೇಶ್, ನಿರ್ದೇಶಕ ಎ.ಹರ್ಷ, ನಂದ ಕಿಶೋರ್, ಸಿಂಪಲ್ ಸುನಿ, ಅಶಿಕಾ ರಂಗನಾಥ್ ಗೆ ಮಾತ್ರ ಆಹ್ವಾನ ಪತ್ರಿಕೆ ನೀಡಲಾಗಿದೆ.

ರಶ್ಮಿಕಾಗೆ ಮೊದಲ ಅವಕಾಶ ಕೊಟ್ಟ ಶೆಟ್ಟಿ ಬಳಗ ಅಥವಾ ಆ ತಂಡದ ಮುಖ್ಯಸ್ಥರು ಈ ಪಟ್ಟಿಯಲ್ಲಿ ಇಲ್ಲ. ರಶ್ಮಿಕಾ ಮೊದಲು 'ಕಿರಿಕ್ ಪಾರ್ಟಿ'ಯಲ್ಲಿ ನಟಿಸಿದ್ದು, ಆ ಚಿತ್ರದಲ್ಲಿ ಶೆಟ್ಟಿ ತಂಡದವರು ದೊಡ್ಡ ಪಾತ್ರ ವಹಿಸಿದ್ದರು. ಆದರೆ ಈಗ ರಶ್ಮಿಕಾ ದೊಡ್ಡ ಸ್ಟಾರ್ ಆಗಿರುವಾಗ ಅವರಿಗೆ ಆಹ್ವಾನ ನೀಡದಿರುವುದು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್!

ಯೋಗೇಶ್ ಗೌಡ ಕೊಲೆ ಕೇಸ್ ಶಿಕ್ಷೆ ಪ್ರಕಟಕ್ಕೂ ಮೊದಲೇ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!

North to South, ಯಾವುದೇ ತಾರತಮ್ಯ, ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ ಗ್ಯಾರಂಟಿ!

ಲೋಕಸಭಾ ಕ್ಷೇತ್ರ ಮರು ವಿಂಗಡಣೆ: 'ದಕ್ಷಿಣ ರಾಜ್ಯಗಳಿಗೆ ಇದಕ್ಕಿಂತ ಉತ್ತಮ ಡೀಲ್ ಸಿಗಲು ಸಾಧ್ಯವಿಲ್ಲ'; ತೇಜಸ್ವಿ ಸೂರ್ಯ

ದಾವಣಗೆರೆ ದಂಗಲ್: ಶಾಮನೂರು ವಿರುದ್ಧ ಕ್ರಮ ಯಾಕಿಲ್ಲ? ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ಇಡೀ ಅಹಿಂದ ವಿರೋಧ ಕಟ್ಟಿಕೊಳ್ಳುತ್ತಿದೆ!

SCROLL FOR NEXT