ಜೀ ಕನ್ನಡದ 'ಅಮೃತಧಾರೆ' ಖ್ಯಾತಿಯ ರಾಣವ್ ಗೌಡ ಮತ್ತು ಕಲರ್ಸ್ ಕನ್ನಡದ 'ಭಾರ್ಗವಿ ಎಲ್ಎಲ್ ಬಿ' ನಟಿ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್ ದಿವಾನ್ ಹಾಗೂ ಮಲ್ಲಿ ಪಾತ್ರ ತುಂಬ ಫೇಮಸ್. ಜಯದೇವ್ ಹಾಗೂ ಮಲ್ಲಿ ಪಾತ್ರಧಾರಿ ಈಗ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.
‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸುವಾಗಲೇ ಇವರ ಮಧ್ಯೆ ಪ್ರೀತಿ ಮೂಡಿತ್ತು ಎಂದು ಹೇಳಲಾಗುತ್ತಾ ಇದೆ. ಸದ್ಯ ರಾಣವ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಹಾರ ಹಾಕಿ ನಿಂತ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ‘ಫೈನಲಿ’ ಎಂಬ ಕ್ಯಾಪ್ಶನ್ ಕೊಟ್ಟಿದ್ದಾರೆ. ರಾಧಾ ಭಗವತಿ ಅವರು ಅಮೃತಧಾರೆ ಧಾರಾವಾಹಿ ಬಿಟ್ಟು, ಭಾರ್ಗವಿ ಎಲ್ಎಲ್ಬಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
ರಾಧಾ ಭಗವತಿ ಮೂಲತಃ ವಿಜಯಪುರದವರು. ಇವರ ತಾತ ರಂಗಭೂಮಿ ಕಲಾವಿದರು. ಜೊತೆಗೆ ಹರಿಕಥೆ ದಾಸರೂ ಕೂಡ ಹೌದು. ಅಮೃತಧಾರೆ ಧಾರಾವಾಹಿಯಲ್ಲಿ ಪೋಷಕ ಪಾತ್ರ ಬಿಟ್ಟು, ಅವರು ಹೀರೋಯಿನ್ ಆಗುವ ಅವಕಾಶವನ್ನು ಆಯ್ಕೆ ಮಾಡಿಕೊಂಡಿದ್ದರು. ರಾಣವ್ ಗೌಡ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಪಾತ್ರ ಮಾಡುತ್ತಿದ್ದಾರೆ.