ರಕ್ಷಿತ್ ಶೆಟ್ಟಿ  
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ಎಲ್ಲಿ ಎಂದು ಕೇಳಿದವರಿಗೆ ಸಿಕ್ಕಿತು ಉತ್ತರ; ಹುಟ್ಟೂರಿನಲ್ಲಿ ನೇಮೋತ್ಸವದಲ್ಲಿ ಭಾಗಿ

ಕಾಂತಾರ ಚಾಪ್ಟರ್ 1, ಸು ಫ್ರಮ್ ಸೋ ಅಥವಾ 45 ಚಿತ್ರ ಬಿಡುಗಡೆಯಾದಾಗಲೂ ಮೂವರೂ ಒಬ್ಬರಿಗೊಬ್ಬರು ಬೆನ್ನುತಟ್ಟಲು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರಿಂದ ಏನೋ ವದಂತಿ ಹಬ್ಬಿತ್ತು.

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈ ಹಿಂದೆ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮೂವರೂ ಒಬ್ಬರಿಗೊಬ್ಬರು ಪರಸ್ಪರ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾ, ಪ್ರೀತಿಯ ಮಾತುಗಳನ್ನು ಆಡುತ್ತಾ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಾ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದರು.

ಆದರೆ ಕಾಂತಾರ ಚಾಪ್ಟರ್ 1, ಸು ಫ್ರಮ್ ಸೋ ಅಥವಾ 45 ಚಿತ್ರ ಬಿಡುಗಡೆಯಾದಾಗಲೂ ಮೂವರೂ ಒಬ್ಬರಿಗೊಬ್ಬರು ಬೆನ್ನುತಟ್ಟಲು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರಿಂದ ಏನೋ ಗುಸುಗುಸು ಹಬ್ಬಿತ್ತು.

ರಕ್ಷಿತ್ ಶೆಟ್ಟಿಯವರು ರನ್ ಆಂಟನಿ ಚಿತ್ರದ ಕಥೆ ಬರೆದುಕೊಂಡು ಅಮೆರಿಕದಲ್ಲಿ ಕುಳಿತಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ನಂತರ ವಾಪಸ್ಸಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್‌, ಮಳೆ ಪ್ರವಾಹ ನಿರ್ವಹಣೆ..' ಬೆಂಗಳೂರಿಗೆ ಮಹತ್ವದ ಘೋಷಣೆಗಳು

ನುಂಗಮಬಕ್ಕಂ ಹೋಟಲ್‌ನಲ್ಲಿ ನಟ ವಿಜಯ್-ತ್ರಿಷಾ ಒಟ್ಟಿಗೆ ಇದ್ದಿದ್ದನ್ನು ನೋಡಿದ್ದೇನೆ, Video Viral!

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..': ಭಾರತದ ಗೆಲುವಿಗೆ ಕಾರಣವಾದ ಅಂಶಗಳು!

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ: ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ

Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ

SCROLL FOR NEXT