ಮಾರ್ಕ್ ಚಿತ್ರದಲ್ಲಿ ನಟ ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಗಲ್ಲಾಪೆಟ್ಟಿಗೆಯಲ್ಲಿ 'ಮಾರ್ಕ್' ಅಬ್ಬರ: ₹51 ಕೋಟಿಗೂ ಅಧಿಕ ಗಳಿಕೆ ಕಂಡ ಕಿಚ್ಚ ಸುದೀಪ್ ನಟನೆಯ ಚಿತ್ರ!

ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ಮಾರ್ಕ್ ಡಿಸೆಂಬರ್ 25 ರಂದು ರಾಜ್ಯದಾದ್ಯಂತ ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಚಿತ್ರಮಂದಿರಗಳಲ್ಲಿ ಎರಡು ವಾರಗಳನ್ನು ಪೂರ್ಣಗೊಳಿಸಿದೆ. ಮ್ಯಾಕ್ಸ್ ನಂತರ ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಚಿತ್ರ ₹51.30 ಕೋಟಿ ಗಳಿಸುವ ಮೂಲಕ ಮೂರನೇ ವಾರಕ್ಕೆ ಕಾಲಿಟ್ಟಿದೆ. ಡಿಸೆಂಬರ್‌ 25ರಂದು ಬಿಡುಗಡೆಯಾದ ಈ ಚಿತ್ರವು, ಹೆಚ್ಚಾಗಿ ಕುಟುಂಬಗಳನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ.

ಈ ಚಿತ್ರವು ಆ್ಯಕ್ಷನ್-ಪ್ಯಾಕ್ಡ್ ಸನ್ನಿವೇಶಗಳು ಮತ್ತು ಭಾವನಾತ್ಮಕ ವಿಚಾರಗಳ ಸಂಯೋಜನೆಯಿಂದಾಗಿ ಮೆಚ್ಚುಗೆ ಪಡೆದಿದೆ. ಹಲವಾರು ಚಿತ್ರಮಂದಿರಗಳು, ವಿಶೇಷವಾಗಿ ಪ್ರಮುಖ ಸರ್ಕ್ಯೂಟ್‌ಗಳಲ್ಲಿ ಜನರು ಮತ್ತೆ ಮತ್ತೆ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ.

ಚಿತ್ರ ಬಿಡುಗಡೆಯಾದ ಆರಂಭಿಕ ಹಂತದ ನಂತರವೂ ಸ್ಥಿರವಾದ ಸಂಗ್ರಹವನ್ನು ಕಾಯ್ದುಕೊಳ್ಳುವುದು ಚಿತ್ರಗಳಿಗೆ ಹೆಚ್ಚು ಸವಾಲಿನ ಸಂಗತಿಯಾಗಿದೆ ಎಂದು ಟ್ರೇಡ್ ವಿಶ್ಲೇಷಕರು ಗಮನಸೆಳೆದಿದ್ದಾರೆ. ಇಂತಹ ಸಂದರ್ಭದಲ್ಲಿ, ಬಿಡುಗಡೆಯಾದ ಮೂರನೇ ವಾರವೂ ಮಾರ್ಕ್ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ವಿಶೇಷವಾಗಿ ಸಿಂಗಲ್-ಸ್ಕ್ರೀನ್ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ, ಚಿತ್ರದ ಗಳಿಕೆಯು ಸ್ಥಿರವಾಗಿಯೇ ಉಳಿದಿದೆ.

ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ಮಾರ್ಕ್ ಡಿಸೆಂಬರ್ 25 ರಂದು ರಾಜ್ಯದಾದ್ಯಂತ ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ.

ಸುದೀಪ್ ಜೊತೆಗೆ ನವೀನ್ ಚಂದ್ರ, ದೀಪ್ಶಿಕಾ, ಗುರು ಸೋಮಸುಂದರಂ, ರೋಶಿನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಡ್ರ್ಯಾಗನ್ ಮಂಜು, ಗೋಪಾಲಕೃಷ್ಣ ದೇಶಪಾಂಡೆ, ಮಹಾಂತೇಶ್ ಹಿರೇಮಠ್, ಯೋಗಿ ಬಾಬು, ಶೈನ್ ಟಾಮ್ ಚಾಕೋ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT