ನಟ ಕಿಚ್ಚಾ ಸುದೀಪ್ 
ಸಿನಿಮಾ ಸುದ್ದಿ

BiggBoss Kannada 12: ‘ಕಿತ್ತೋದ್ ಕೆಲಸ ಅಂತೂ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೀತಿದೆ’; Kiccha Sudeep ವಿಡಿಯೋ ವೈರಲ್!

ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, ಕಳೆದ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ನಟ ಕಿಚ್ಚಾ ಸುದೀಪ್ ಈ ಸೀಸನ್ ಕಿಚ್ಚನ ಚಪ್ಪಾಳೆಯನ್ನು ದ್ರುವಂತ್ ಅವರಿಗೆ ನೀಡಿದ್ದರು.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಅಂತಿಮ ಘಟ್ಟ ತಲುಪಿದ್ದು, ಫಿನಾಲೆ ವಾರ ಚಾಲ್ತಿಯಲ್ಲಿರುವಂತೆಯೇ ವಿರೋಧಿಗಳಿಗೆ ನಟ ಕಿಚ್ಚಾ ಸುದೀಪ್ ನೀಡಿರುವ ಹೇಳಿಕೆ ಭಾರಿ ವೈರಲ್ ಆಗುತ್ತಿದೆ.

ಹೌದು.. ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, ಕಳೆದ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ನಟ ಕಿಚ್ಚಾ ಸುದೀಪ್ ಈ ಸೀಸನ್ ಕಿಚ್ಚನ ಚಪ್ಪಾಳೆಯನ್ನು ದ್ರುವಂತ್ ಅವರಿಗೆ ನೀಡಿದ್ದರು.

ನಟ ಕಿಚ್ಚಾ ಸುದೀಪ್ ಮತ್ತು ಬಿಗ್ ಬಾಸ್ ಆಡಳಿತ ವಿಭಾಗದ ಈ ನಿರ್ಧಾರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಪ್ರಮುಖವಾಗಿ ನಟ ಗಿಲ್ಲಿ ಅಭಿಮಾನಿಗಳಿಗೆ ಅಸಮಾಧನ ಉಂಟು ಮಾಡಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಟ ಕಿಚ್ಚಾ ಸುದೀಪ್ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

‘ಧ್ರುವಂತ್ ಸಾಕಷ್ಟು ಮನರಂಜನೆ ನೀಡಿದ್ದಾರೆ. ಅವರ ವಿಟಿ ವಿಶೇಷವಾಗಿ ಇರುತ್ತದೆ’ ಎಂದು ಸುದೀಪ್ ಬಿಗ್ ಬಾಸ್ ವೇದಿಕೆ ಮೇಲೆ ಹೇಳಿದ್ದರು. ಇದು ಗಿಲ್ಲಿ ಫ್ಯಾನ್ಸ್​​ನ ಕೆರಳಿಸಿದೆ. ‘ಸೀಸನ್ ಆರಂಭದಿಂದಲೂ ಗಿಲ್ಲಿ ಮನರಂಜನೆ ನೀಡುತ್ತಾ ಬಂದವರು. ಧ್ರುವಂತ್​ಗೆ ಹೋಲಿಸಿದರೆ ಗಿಲ್ಲಿ ತುಂಬಾನೇ ಬೆಟರ್’ ಎಂದು ಗಿಲ್ಲಿ ಫ್ಯಾನ್ಸ್ ವಾದ ಮುಂದಿಡುತ್ತಿದ್ದಾರೆ. ಸುದೀಪ್ ಅವರನ್ನು ಟೀಕಿಸುವ ಕೆಲಸ ಕೂಡ ಆಗಿದೆ.

ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು

ಇನ್ನು ಸುದೀಪ್ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ಕೂಡ ಖಡಕ್ ತಿರುಗೇಟು ನೀಡಿದ್ದು, ಸುದೀಪ್ ಅವರು 10ನೇ ಸೀಸನ್​ ಅಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಆ ವಿಡಿಯೋ ಹಂಚಿಕೊಂಡು ಮತ್ತೆ ವೈರಲ್ ಮಾಡಲಾಗುತ್ತಿದೆ.

ಕಿತ್ತೋದ್ ಕೆಲಸ ಅಂತೂ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೀತಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸಂದರ್ಭದಲ್ಲೂ ಸುದೀಪ್ ಅವರನ್ನು ಸೋಶಿಯಲ್ ಮೀಡಿಯದಲ್ಲಿ ಟೀಕಿಸಲಾಗಿತ್ತು. ಈ ಟೀಕೆಗಳ ಸಂದರ್ಭದಲ್ಲಿ ಸುದೀಪ್ ಒಂದು ಮಾತನ್ನು ಹೇಳಿದ್ದರು. ಈ ಮಾತುಗಳೇ ಇದೀಗ ಮತ್ತೆ ವೈರಲ್ ಆಗುತ್ತಿದೆ.

'ನನಗಾಗೇ ದುಡ್ಡು ಕೊಟ್ಟು ಸೃಷ್ಟಿಸಿದ ಟ್ರೋಲ್ ಪೇಜ್​​ಗಳಿವೆ. ನಾನು ಗುಡ್ ಮಾರ್ನಿಂಗ್ ಎಂದರೆ ನಿನ್ನ ಗುಡ್ ಮಾರ್ನಿಂಗ್ ಯಾರಿಗೆ ಬೇಕು ಎನ್ನುತ್ತಾರೆ. ಅವರು ನನ್ನ ಬಗ್ಗೆ ಮಾತನಾಡುತ್ತಾರೆ. ನಾನು ಮಜಾ ತೆಗೆದಿಕೊಳ್ಳುತ್ತೇನೆ. ಕಿತ್ತೋದ್ ಕೆಲಸ ನಾನಂತೂ ಮಾಡಿಲ್ಲ. ಅವರ ಟ್ರೋಲ್ ಬಗ್ಗೆ ನಂಗೆ ಬೇಸರ ಇಲ್ಲ. ಏಕೆಂದರೆ ನನ್ನಿಂದ ಅವರ ಹೊಟ್ಟೆ ಪಾಡು ನಡೆಯುತ್ತಿದೆ' ಎಂದು ಟ್ರೋಲರ್ಸ್ ಗಳಿಗೆ ಸುದೀಪ್ ಖಡಕ್ ತಿರುಗೇಟು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ