ಎಸ್ ಜಾನಕಿ-ಮುರಳಿ ಕೃಷ್ಣ 
ಸಿನಿಮಾ ಸುದ್ದಿ

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ.

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಜನವರಿ 22ರ ಗುರುವಾರ ಮುಂಜಾನೆ ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ ನಿಧನವು ಸಿನಿಮಾರಂಗದಲ್ಲಿ ದುಃಖದ ಅಲೆಯನ್ನು ಉಂಟುಮಾಡಿದೆ. ಈ ಕಷ್ಟದ ಸಮಯದಲ್ಲಿ ಕಲಾವಿದರು, ಸಂಗೀತಗಾರರು ಮತ್ತು ಅಭಿಮಾನಿಗಳು ಖ್ಯಾತ ಗಾಯಕಿ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನಿಸಿದ ಎಸ್ ಜಾನಕಿ 1950ರ ದಶಕದ ಆರಂಭದಲ್ಲಿ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ಅಂತಿಮವಾಗಿ ಚೆನ್ನೈನಲ್ಲಿ ನೆಲೆಸಿದರು. ಇದು ಅವರ ವೃತ್ತಿಜೀವನದ ಅತ್ಯಂತ ಸಮೃದ್ಧ ಅವಧಿಯನ್ನು ಗುರುತಿಸಿತು. ಅವರು ರಾಮ್ ಪ್ರಸಾದ್ ಅವರನ್ನು ವಿವಾಹವಾಗಿದ್ದು ದಂಪತಿಗೆ ಮಗನಾಗಿ ಮುರಳಿ ಕೃಷ್ಣ ಜನಿಸಿದ್ದರು.

ಮುರಳಿ ಕೃಷ್ಣ ಸಿನಿಮಾಗಳ ಬಗ್ಗೆ, ವಿಶೇಷವಾಗಿ ತಮಿಳು ಮತ್ತು ತೆಲುಗು ಚಿತ್ರಗಳ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದರು. ಭರತನಾಟ್ಯದಲ್ಲಿಯೂ ತರಬೇತಿ ಪಡೆದಿದ್ದರು. ಅವರು ಚೆನ್ನೈ ಮೂಲದ ನರ್ತಕಿ ಉಮಾ ಅವರನ್ನು ವಿವಾಹವಾಗಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ನಂತರ ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಛೇದನ ಪಡೆದು ತಾಯಿಯೊಂದಿಗೆ ವಾಸಿಸುತ್ತಿದ್ದರು. ಮುರಳಿ ಕೃಷ್ಣ ಅವರು ಮುಂಜಾನೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ