ಹೊಟೆಲ್ ನಲ್ಲಿ ಬಿರಿಯಾನಿ ಸವಿದ ನಟ ಡಾಲಿ ಧನಂಜಯ 
ಸಿನಿಮಾ ಸುದ್ದಿ

ನಟ ಡಾಲಿ ಧನಂಜಯ ಬಿರಿಯಾನಿ ತಿಂದದ್ದು ಸುದ್ದಿಯಾಗಿದೆ ಏಕೆ? Video!

ಬಿರಿಯಾನಿ ಹೋಟೆಲ್‌ವೊಂದರ ಉದ್ಘಾಟನೆಗೆ ಹೋಗಿದ್ದ ನಟ ಡಾಲಿ ಧನಂಜಯ ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್‌ನಲ್ಲಿಯೇ ಬಾಳೆಎಲೆಯಲ್ಲಿ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ.

ಬೆಂಗಳೂರು: ನಟ ಡಾಲಿ ಧನಂಜಯ್ ಅವರು ಬಿರಿಯಾನಿ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಲಿಂಗಾಯತರಾಗಿ ಅವರು ಮಾಂಸಾಹಾರ ಸೇವಿಸಬಹುದೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಬಿರಿಯಾನಿ ಹೋಟೆಲ್‌ವೊಂದರ ಉದ್ಘಾಟನೆಗೆ ಹೋಗಿದ್ದ ನಟ ಡಾಲಿ ಧನಂಜಯ ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್‌ನಲ್ಲಿಯೇ ಬಾಳೆಎಲೆಯಲ್ಲಿ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ.

ಈ ಕುರಿತ ಫೋಟೋಗಳು ಮತ್ತು ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಅಂತೆಯೇ ಲಿಂಗಾಯತರಾಗಿರುವ ಡಾಲಿ ಧನಂಜಯ ಮಾಂಸಾಹಾರ ಸೇವನೆ ಮಾಡಬಹುದಾ..? ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ.

@sanatan_kannada ಪೋಸ್ಟ್‌ ಮಾಡಿರುವ ವಿಡಿಯೋಗೆ ಸಾಕಷ್ಟು ಕಾಮೆಂಟ್‌ಗಳು ಬಂದಿದ್ದು,'ಲಿಂಗಾಯತರ ಮಾಂಸಾಹಾರ ಸೇವನೆ ಮಾಡೋದಿಲ್ಲ ಅಂತಾ ಹೇಳಿದವರು ಯಾರು? ಲಿಂಗಾಯುತ ಧರ್ಮದ ಆರಂಭದಲ್ಲೇ ವೇದಗಳನ್ನು ವಿರೋಧಿಸಿದ್ದವು.

ಅವರು ಆಗಲೇ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಲಿಂಗಾಯತ ಧರ್ಮ ಯಾರಿಗೂ ಯಾವುದನ್ನೂ ಹೇರೋದಿಲ್ಲ' ಎಂದು ವ್ಯಕ್ತಿಯೊಬ್ಬರು ಕಾಮೆಂಟ್‌ ಮಾಡಿದ್ದಾರೆ.

'ದಯವಿಲ್ಲದ ಧರ್ಮವದೇವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ ಧರ್ಮದ ಮೂಲವಯ್ಯಾ: ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ. ಬಸವಾದಿ ಶರಣರ ವಚನಗಳೆಲ್ಲವೂ ರಾಜಕೀಯ ಲಾಭಕ್ಕೂ ಹಾಗೂ ಹೊಟ್ಟೆಪಾಡಿಗಷ್ಟೇ ಬಳಸಲಾಗುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ, ಇದು ಸರಿಯಲ್ಲ' ಎಂದು ಡಾಲಿ ಬಿರಿಯಾನಿ ತಿನ್ನೋ ವಿಡಿಯೋವನ್ನು ಕಿರಣ್‌ ಆರಾಧ್ಯ ಎನ್ನುವವರು ಟೀಕಿಸಿದ್ದಾರೆ.

ನಾನ್ ವೆಜ್ ಪ್ರಿಯ: ಮೊದಲೇ ಸ್ಪಷ್ಟನೆ ನೀಡಿದ್ದ ಡಾಲಿ

ಇನ್ನು ತಮ್ಮ ಊಟದ ಕುರಿತು ನಟ ಡಾಲಿ ಧನಂಜಯ್ ಮೊದಲೇ ಸ್ಪಷ್ಟನೆ ನೀಡಿದ್ದರು. ಈ ಹಿಂದೆ ಹೊಯ್ಲಳ ಚಿತ್ರದ ಸಂದರ್ಭದಲ್ಲಿ ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಡಾಲಿ 'ತಾವು ನಾನ್ ವೆಜ್ ಪ್ರಿಯರಾಗಿದ್ದು, ಹೊಯ್ಸಳ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿರುವುದರಿಂದ ಡಯಟ್ ನಲ್ಲಿದ್ದೇನೆ' ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ