ಸಿಸಿಎಲ್ ವಿವಾದ 
ಸಿನಿಮಾ ಸುದ್ದಿ

CCL ವಿವಾದ: ಅವಾಚ್ಯ ಪದ ಬಳಕೆ ಕುರಿತು ಕಿಚ್ಚಾ ಸುದೀಪ್ ಸ್ಪಷ್ಟನೆ, ಜೋಗಿ ಪ್ರೇಮ್ ಕಾರಣ?

ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯದಲ್ಲಿ ಅವಾಚ್ಯ ಶಬ್ದ ಬಳಕೆ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ.

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೇಳೆ ಅವಾಚ್ಯ ಪದ ಬಳಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚಾ ಸುದೀಪ್ ಕೊನೆಗೂ ಸ್ಪಷ್ಟನೆ ನೀಡಿದ್ದು, ಇದಕ್ಕೆ ಜೋಗಿ ಪ್ರೇಮ್ ಕಾರಣ ಎಂದು ಹೇಳಿದ್ದಾರೆ.

ಹೌದು.. ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯದಲ್ಲಿ ಅವಾಚ್ಯ ಶಬ್ದ ಬಳಕೆ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ.

ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಸುದೀಪ್ ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್ ನಲ್ಲಿ ಪಾಲ್ಗೊಂಡು ಮಾತನಾಡಿದ ಕಿಚ್ಚಾ ಸುದೀಪ್, ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿರ್ದೇಶಕ ಜೋಗಿ ಪ್ರೇಮ್ ಅವರು ಮೊದಲು ಈ ವಿಷಯ ತೆಗೆದರು. ಈ ಮೊದಲು ಜೋಗಿ ಪ್ರೇಮ್ ಅವರು ಏನಾದರೂ ಮಾತನಾಡುವಾಗ ಕೆಟ್ಟ ಪದ ಬಳಕೆ ಮಾಡಿದರೆ ಸುದೀಪ್ ಅದನ್ನು ಪ್ರಶ್ನೆ ಮಾಡುತ್ತಿದ್ದರಂತೆ. ಹಾಗೆಲ್ಲ ಏಕೆ ಮಾತನಾಡಿದೆ ಎಂದು ಕೇಳುತ್ತಿದ್ದರಂತೆ. ಈಗ ಸುದೀಪ್ ಕೂಡ ಬಳಕೆಗೆ ಅರ್ಹವಲ್ಲದ ಶಬ್ದ ಹೇಳಿದ್ದನ್ನು ಕೇಳಿ ಖುಷಿ ಆಗಿದೆ ಎಂದರು.

‘ನಾನು ಬರುವಾಗ ಒಂದು ವಿಡಿಯೋ ನೋಡಿದೆ. ಇಡೀ ಕರ್ನಾಟಕ ವಿಡಿಯೋ ನೋಡಿದೆ. ಆಗ ಸುದೀಪ್ ಕೆಟ್ಟ ಪದ ಬಳಕೆ ಮಾಡಿದ್ರೆ ಬೈತಿದ್ರು. ಆದ್ರೆ ಈಗ ಸುದೀಪ್ ಕೂಡ ನಮ್ಮ ರೂಟ್​​​​ಗೆ ಬಂದ್ರಲ್ಲ ಎಂಬುದೇ ಖುಷಿ. ಅವರು ಅದನ್ನು ಹೇಳಿದ ಸ್ಟೈಲ್ ಚೆನ್ನಾಗಿತ್ತು’ ಎಂದು ಪ್ರೇಮ್ ಹೇಳಿದರು.

ತಿರುಗೇಟು ಕೊಟ್ಟ ಪ್ರೇಮ

‘ಮೊನ್ನೆ ಏನು ವೈರಲ್ ಆಯ್ತಲ್ಲ ರೀಲ್​ ಅದಕ್ಕೆ ಕಾರಣ ಗುರುಗಳು ಪ್ರೇಮ್. ಸೆಮಿ ಫೈನಲ್ ಅಲ್ಲಿ ಏನಾದರೂ ಬಂದರೆ ಅದಕ್ಕೆ ಕಾರಣನೂ ಪ್ರೇಮ್ ಅವರೇ’ ಎಂದು ಸುದೀಪ್ ನಿರ್ದೇಶಕ ಜೋಗಿ ಪ್ರೇಮ್ ಕಾಲೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದಕ್ಕೆ ಒಪ್ಕೋತೀರೋ ಇಲ್ವೋ.. Kharg ದ್ವೀಪ ಸ್ಫೋಟಿಸ್ತೀವಿ..: ಇರಾನ್ ಗೆ Donald Trump ಅಂತಿಮ ಗಡುವು

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

IPL 2026: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; CSK ವಿರುದ್ಧ RRಗೆ ಭರ್ಜರಿ ಗೆಲುವು

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ!

SCROLL FOR NEXT