ಜಾನಕಿಯಮ್ಮನ ಜೊತೆಗೆ ತ್ರಿಶಾ ಕೃಷ್ಣನ್ 
ಸಿನಿಮಾ ಸುದ್ದಿ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಈ ಮಧ್ಯೆ ಎಸ್ ಜಾನಕಿ ಅವರು ನಟಿಸಿದ್ದ 96 ಚಿತ್ರದಲ್ಲಿನ ಡಿಲೀಟ್ ಆಗಿರುವ ಸನ್ನಿವೇಶವೊಂದನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ರಾಮ್ ಪಾತ್ರದಲ್ಲಿ ವಿಜಯ್ ಸೇತುಪತಿ ಮತ್ತು ಜಾನಕಿ ಪಾತ್ರದಲ್ಲಿ ತ್ರಿಷಾ ಅಭಿನಯಿಸಿದ್ದಾರೆ.

ದಕ್ಷಿಣ ಭಾರತದ ಗಾನಕೋಗಿಲೆ ಎಂದೇ ಹೆಸರಾದ ಎಸ್ ಜಾನಕಿ ನಿಧನದ ಸಂದರ್ಭದಲ್ಲಿ ನಟಿ ತ್ರಿಶಾ ಕೃಷ್ಣನ್ ಎಲ್ಲಿಯೂ ಕಾಣಿಸದ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಭಾವಪೂರ್ವಕ ನಮನ ಸಲ್ಲಿಸಿದ್ದಾರೆ.

‘ನನ್ನ ಅತ್ಯಂತ ವಿಶೇಷವಾದ ಚಿತ್ರವೊಂದರಲ್ಲಿ ನಿಮ್ಮ ಹೆಸರಿನ ಪಾತ್ರವನ್ನು ಮಾಡಿದ್ದು ನನ್ನ ಜೀವನದ ಅತ್ಯಂತ ದೊಡ್ಡ ಗೌರವಗಳಲ್ಲಿ ಒಂದಾಗಿ ಎಂದೆಂದಿಗೂ ಉಳಿಯುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

'96 ' ಚಿತ್ರದ ಶೂಟಿಂಗ್ ನ ಪೋಟೋಗಳನ್ನು ಹಂಚಿಕೊಂಡಿರುವ ತ್ರಿಶಾ, ಆ ಹಿರಿಯ ಗಾಯಕಿಯನ್ನು ಭೇಟಿಯಾದ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಹಳದಿ ಕುರ್ತಾ ಮತ್ತು ನೀಲಿ ಸ್ಕಾರ್ಫ್ ಧರಿಸಿರುವ ತ್ರಿಶಾ, ಜಾನಕಿ ಅಮ್ಮ ಅವರನ್ನು ಅಪ್ಪಿಕೊಳ್ಳುತ್ತಿರುವುದು ಮತ್ತು ಅವರೊಂದಿಗೆ ಫೋಟೋಗೆ ಪೋಸ್ ನೀಡುತ್ತಿರುವುದು ಈ ಫೋಟೋದಲ್ಲಿದೆ.

ನಿಮ್ಮಿಂದ ಪ್ರೀತಿ ಪಡೆದಿರುವುದು ನಾನು ಜೀವನದಲ್ಲಿ ಎಂದೆಂದಿಗೂ ಸಂಭ್ರಮಿಸುವ ಸಂಗತಿಯಾಗಿದೆ. ನಿಮ್ಮ ಅಪ್ಪುಗೆಗೆ, ನಿಮ್ಮ ದಯೆಗೆ, ನಿಮ್ಮ ನಗುವಿಗೆ ಧನ್ಯವಾದಗಳು. ಕಲಾವಿದರು ಯಾವಾಗಲೂ ಅತ್ಯಂತ ವಿನಮ್ರವಾಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಧ್ವನಿ ಎಂದೆಂದಿಗೂ ಜೀವಂತವಾಗಿರುತ್ತದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಅಮ್ಮ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ.

ಈ ಮಧ್ಯೆ ಎಸ್ ಜಾನಕಿ ಅವರು ನಟಿಸಿದ್ದ 96 ಚಿತ್ರದಲ್ಲಿನ ಡಿಲೀಟ್ ಆಗಿರುವ ಸನ್ನಿವೇಶವೊಂದನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ರಾಮ್ ಪಾತ್ರದಲ್ಲಿ ವಿಜಯ್ ಸೇತುಪತಿ ಮತ್ತು ಜಾನಕಿ ಪಾತ್ರದಲ್ಲಿ ತ್ರಿಶಾ ಅಭಿನಯಿಸಿದ್ದಾರೆ.

ರಾಮು ಪ್ರೀತಿಯಿಂದ ಜಾನು ಎಂದು ಕರೆಯುತ್ತಾ, ಗಾಯಕಿ ಮನೆಗೆ ಭೇಟಿ ನೀಡುತ್ತಾರೆ. ಜಾನು ತನ್ನ ಅನೇಕ ಹಾಡುಗಳನ್ನು ಸುಂದರವಾಗಿ ಹಾಡುತ್ತಿದ್ದರೂ, ಆಕೆ ಎಂದಿಗೂ ತನ್ನ ನೆಚ್ಚಿನ ಹಾಡನ್ನು ಹಾಡುವುದಿಲ್ಲ ಎಂದು ರಾಮ್, ಜಾನಕಿ ಅಮ್ಮನಿಗೆ ಹೇಳುತ್ತಾನೆ. ಆಗ ತ್ರಿಷಾ ಪಾತ್ರದ ಹೆಸರು ಎಸ್ ಜಾನಕಿ ದೇವಿ ಎಂಬುದು ಜಾನಕಿಯಮ್ಮನಿಗೆ ತಿಳಿಯುತ್ತದೆ. ನಗುತ್ತಾ, ಆಕೆ ತನಗಿಂತ ಉತ್ತಮವಾಗಿ ಹಾಡಬೇಕೆಂದು ಹೇಳುತ್ತಾರೆ. ಇದು ಸಿನಿಮಾದಲ್ಲಿ ಅಳಿಸಲಾದ ಅತ್ಯಂತ ಜನಪ್ರಿಯ ದೃಶ್ಯಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಅಯೋಧ್ಯೆ ಟ್ರಸ್ಟ್ ಸಿಇಒ ಅಧಿಕಾರಗಳನ್ನು ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ