ಜಾನಕಿಯಮ್ಮನ ಜೊತೆಗೆ ತ್ರಿಶಾ ಕೃಷ್ಣನ್ 
ಸಿನಿಮಾ ಸುದ್ದಿ

'96' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್; Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video

ಈ ಮಧ್ಯೆ ಎಸ್ ಜಾನಕಿ ಅವರು ನಟಿಸಿದ್ದ 96 ಚಿತ್ರದಲ್ಲಿನ ಡಿಲೀಟ್ ಆಗಿರುವ ಸನ್ನಿವೇಶವೊಂದನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ರಾಮ್ ಪಾತ್ರದಲ್ಲಿ ವಿಜಯ್ ಸೇತುಪತಿ ಮತ್ತು ಜಾನಕಿ ಪಾತ್ರದಲ್ಲಿ ತ್ರಿಷಾ ಅಭಿನಯಿಸಿದ್ದಾರೆ.

ದಕ್ಷಿಣ ಭಾರತದ ಗಾನಕೋಗಿಲೆ ಎಂದೇ ಹೆಸರಾದ ಎಸ್ ಜಾನಕಿ ನಿಧನದ ಸಂದರ್ಭದಲ್ಲಿ ನಟಿ ತ್ರಿಶಾ ಕೃಷ್ಣನ್ ಎಲ್ಲಿಯೂ ಕಾಣಿಸದ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಭಾವಪೂರ್ವಕ ನಮನ ಸಲ್ಲಿಸಿದ್ದಾರೆ.

‘ನನ್ನ ಅತ್ಯಂತ ವಿಶೇಷವಾದ ಚಿತ್ರವೊಂದರಲ್ಲಿ ನಿಮ್ಮ ಹೆಸರಿನ ಪಾತ್ರವನ್ನು ಮಾಡಿದ್ದು ನನ್ನ ಜೀವನದ ಅತ್ಯಂತ ದೊಡ್ಡ ಗೌರವಗಳಲ್ಲಿ ಒಂದಾಗಿ ಎಂದೆಂದಿಗೂ ಉಳಿಯುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

'96 ' ಚಿತ್ರದ ಶೂಟಿಂಗ್ ನ ಪೋಟೋಗಳನ್ನು ಹಂಚಿಕೊಂಡಿರುವ ತ್ರಿಶಾ, ಆ ಹಿರಿಯ ಗಾಯಕಿಯನ್ನು ಭೇಟಿಯಾದ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಹಳದಿ ಕುರ್ತಾ ಮತ್ತು ನೀಲಿ ಸ್ಕಾರ್ಫ್ ಧರಿಸಿರುವ ತ್ರಿಶಾ, ಜಾನಕಿ ಅಮ್ಮ ಅವರನ್ನು ಅಪ್ಪಿಕೊಳ್ಳುತ್ತಿರುವುದು ಮತ್ತು ಅವರೊಂದಿಗೆ ಫೋಟೋಗೆ ಪೋಸ್ ನೀಡುತ್ತಿರುವುದು ಈ ಫೋಟೋದಲ್ಲಿದೆ.

ನಿಮ್ಮಿಂದ ಪ್ರೀತಿ ಪಡೆದಿರುವುದು ನಾನು ಜೀವನದಲ್ಲಿ ಎಂದೆಂದಿಗೂ ಸಂಭ್ರಮಿಸುವ ಸಂಗತಿಯಾಗಿದೆ. ನಿಮ್ಮ ಅಪ್ಪುಗೆಗೆ, ನಿಮ್ಮ ದಯೆಗೆ, ನಿಮ್ಮ ನಗುವಿಗೆ ಧನ್ಯವಾದಗಳು. ಕಲಾವಿದರು ಯಾವಾಗಲೂ ಅತ್ಯಂತ ವಿನಮ್ರವಾಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಧ್ವನಿ ಎಂದೆಂದಿಗೂ ಜೀವಂತವಾಗಿರುತ್ತದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಅಮ್ಮ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ.

ಈ ಮಧ್ಯೆ ಎಸ್ ಜಾನಕಿ ಅವರು ನಟಿಸಿದ್ದ 96 ಚಿತ್ರದಲ್ಲಿನ ಡಿಲೀಟ್ ಆಗಿರುವ ಸನ್ನಿವೇಶವೊಂದನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ರಾಮ್ ಪಾತ್ರದಲ್ಲಿ ವಿಜಯ್ ಸೇತುಪತಿ ಮತ್ತು ಜಾನಕಿ ಪಾತ್ರದಲ್ಲಿ ತ್ರಿಶಾ ಅಭಿನಯಿಸಿದ್ದಾರೆ.

ರಾಮು ಪ್ರೀತಿಯಿಂದ ಜಾನು ಎಂದು ಕರೆಯುತ್ತಾ, ಗಾಯಕಿ ಮನೆಗೆ ಭೇಟಿ ನೀಡುತ್ತಾರೆ. ಜಾನು ತನ್ನ ಅನೇಕ ಹಾಡುಗಳನ್ನು ಸುಂದರವಾಗಿ ಹಾಡುತ್ತಿದ್ದರೂ, ಆಕೆ ಎಂದಿಗೂ ತನ್ನ ನೆಚ್ಚಿನ ಹಾಡನ್ನು ಹಾಡುವುದಿಲ್ಲ ಎಂದು ರಾಮ್, ಜಾನಕಿ ಅಮ್ಮನಿಗೆ ಹೇಳುತ್ತಾನೆ. ಆಗ ತ್ರಿಷಾ ಪಾತ್ರದ ಹೆಸರು ಎಸ್ ಜಾನಕಿ ದೇವಿ ಎಂಬುದು ಜಾನಕಿಯಮ್ಮನಿಗೆ ತಿಳಿಯುತ್ತದೆ. ನಗುತ್ತಾ, ಆಕೆ ತನಗಿಂತ ಉತ್ತಮವಾಗಿ ಹಾಡಬೇಕೆಂದು ಹೇಳುತ್ತಾರೆ. ಇದು ಸಿನಿಮಾದಲ್ಲಿ ಅಳಿಸಲಾದ ಅತ್ಯಂತ ಜನಪ್ರಿಯ ದೃಶ್ಯಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ