ಮಾ ಇಂಟಿ ಬಂಗಾರಂ ಚಿತ್ರದಲ್ಲಿ ನಟಿ ಸಮಂತಾ 
ಸಿನಿಮಾ ಸುದ್ದಿ

ಒಟಿಗೆ ಬರಲು ಸಿದ್ಧವಾಯ್ತು ಸಮಂತಾ ರುತ್ ಪ್ರಭು ನಟನೆಯ 'ಮಾ ಇಂಟಿ ಬಂಗಾರಂ'; ಜುಲೈ 17 ರಂದು ಪ್ರೀಮಿಯರ್!

ಈ ಚಿತ್ರದಲ್ಲಿ ಗೌತಮಿ, ಮಂಜುಷಾ ಮತ್ತು ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆಯನ್ನು ರಾಜ್ ನಿಡಿಮೋರು ಬರೆದಿದ್ದರೆ, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಚೆನ್ನೈ: ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸುಮಾರು ಒಂದು ತಿಂಗಳ ನಂತರ ನಟಿ ಸಮಂತಾ ರುತ್ ಪ್ರಭು ನಟನೆಯ ಆ್ಯಕ್ಷನ್ ಡ್ರಾಮಾ 'ಮಾ ಇಂಟಿ ಬಂಗಾರಂ' ಚಿತ್ರ ಒಟಿಟಿ ವೇದಿಕೆಗೆ ಬರಲು ಸಿದ್ಧವಾಗಿದ್ದು, ಜುಲೈ 17 ರಂದು ಜಿಯೋ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ.

ಬಿವಿ ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರವು ಜೂನ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತು. ತಮಿಳಿನಲ್ಲಿ 'ಎಂಗಲ್ ತಂಗಂ' ಎಂಬ ಹೆಸರಿನಲ್ಲಿ ಬಿಡುಗಡೆಯಾಯಿತು. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸಮಂತಾ, ತಮ್ಮ ನಿರ್ಮಾಣ ಬ್ಯಾನರ್ ಅಡಿಯಲ್ಲಿಯೇ ಚಿತ್ರ ನಿರ್ಮಿಸಿದರು.

ಈ ಚಿತ್ರದಲ್ಲಿ ಗೌತಮಿ, ಮಂಜುಷಾ ಮತ್ತು ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆಯನ್ನು ರಾಜ್ ನಿಡಿಮೋರು ಬರೆದಿದ್ದರೆ, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಮಯೋಸಿಟಿಸ್ ರೋಗದಿಂದಾಗಿ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದ ಸಮಂತಾ ಅವರು 'ಮಾ ಇಂಟಿ ಬಂಗಾರಂ' ಚಿತ್ರದ ಮೂಲಕ ಬೆಳ್ಳಿಪರದೆಯಲ್ಲಿ ಕಾಣಿಸಿಕೊಂಡರು.

ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಮಂತಾ ಅವರ ನಟನೆಯನ್ನು ಪ್ರೇಕ್ಷಕರು ಮೆಚ್ಚಿಕೊಂಡರು.

ನಿರ್ಮಾಪಕರ ಪ್ರಕಾರ, ಈ ಚಿತ್ರ ಬಿಡುಗಡೆಯಾದ 22 ದಿನಗಳಲ್ಲಿ ವಿಶ್ವದಾದ್ಯಂತ ₹100 ಕೋಟಿಗಳಿಗೂ ಹೆಚ್ಚು ಗಳಿಸಿದೆ. ಬಿಡುಗಡೆಯಾದ ಮೊದಲ ದಿನವೇ ಸುಮಾರು ₹13 ಕೋಟಿ ಗಳಿಕೆ ಕಂಡಿತ್ತು.

ಈ ಚಿತ್ರವು ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಮಹಿಳಾ ಪ್ರಧಾನ ತೆಲುಗು ಚಿತ್ರವಾಗಿ ಹೊರಹೊಮ್ಮಿದೆ ಮತ್ತು OTT ವೇದಿಕೆಯಲ್ಲಿ ತನ್ನ ಬಲವಾದ ಓಟವನ್ನು ಮುಂದುವರಿಸುವ ನಿರೀಕ್ಷೆಯಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CCTV ಕಡ್ಡಾಯ: ಮುಜರಾಯಿ ದೇವಾಲಯಗಳಲ್ಲಿ ಭದ್ರತೆ, ದೇಣಿಗೆಗಳ ಪಾರದರ್ಶಕತೆಗಾಗಿ ರಾಜ್ಯ ಸರ್ಕಾರದಿಂದ SOP

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಖಡಕ್ ಸೂಚನೆ

ಹನಿಮೂನ್ ಆಯ್ತು, ಈಗ ರೈಲಿನಲ್ಲೇ ಪೂಜೆ-ಪುನಸ್ಕಾರ; video ವೈರಲ್, ಇಲಾಖೆ ಸ್ಪಷ್ಟನೆ! ಇಷ್ಟಕ್ಕೂ ಏನಿದು ಸಲೂನ್ ಕೋಚ್?

ಹೇ... ನಿಂಗೆ ಗೊತ್ತ ನಮ್ಮ ತಾತ ಸಬ್ ಇನ್ಸ್‌ಪೆಕ್ಟರ್‌: ಕಾರು ಚಲಾಯಿಸಿದ್ದ 6 ವರ್ಷದ ಬಾಲಕಿಯಿಂದ ಸಾರ್ವಜನಿಕರಿಗೆ ಅವಾಜ್, Video!

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಟ್ರಂಪ್ ಯಿಂದ ಪಡೆಯಬೇಕಾ? ಶ್ವೇತಭವನ ಹೊರಗೆ ಪ್ರತಿಭಟಿಸಬೇಕಾ? ಕೇಂದ್ರದ ವಿರುದ್ಧ CM ಒಮರ್ ಅಬ್ದುಲ್ಲಾ ಕಿಡಿ