ನಟಿ ಉಮಾ ಶಂಕರಿ 
ಸಿನಿಮಾ ಸುದ್ದಿ

ಉಪ್ಪಿದಾದ ಬೆಡಗಿಗೆ ಸ್ತನ ಕ್ಯಾನ್ಸರ್: ಶಾಕಿಂಗ್ ಪೋಸ್ಟ್ ಹಂಚಿಕೊಂಡ ನಟಿ ಉಮಾ ಶಂಕರಿ; ಹೇಳಿದ್ದೇನು?

ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ಉಮಾ ಅವರು ಮದುವೆಯ ನಂತರ ನಟನೆಯಿಂದ ದೂರ ಉಳಿದಿದ್ದರು.

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸಿದ 'ಉಪ್ಪಿದಾದ ಎಂ.ಬಿ.ಬಿ.ಎಸ್ ಸಿನಿಮಾದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ನಟಿ ಉಮಾ ಶಂಕರಿ ಅವರಿಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.

ಈ ಆಘಾತಕಾರಿ ಸುದ್ದಿಯನ್ನು ಸ್ವತಃ ನಟಿ ಉಮಾ ಶಂಕರಿ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಂಡಿದ್ದು, ಸದ್ಯ ಅವರ ಈ ಭಾವನಾತ್ಮಕ ಪೋಸ್ಟ್ ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳಲ್ಲಿ ತೀವ್ರ ಕಳವಳವನ್ನು ಉಂಟುಮಾಡಿದೆ.

ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ಉಮಾ ಅವರು ಮದುವೆಯ ನಂತರ ನಟನೆಯಿಂದ ದೂರ ಉಳಿದಿದ್ದರು. ಇದೀಗ ಇತ್ತೀಚೆಗೆ ತಮಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಬಹಿರಂಗಪಡಿಸಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದು, ಎರಡನೇ ಸುತ್ತಿನ ಕಿಮೊಥೆರಪಿಯನ್ನು ಪ್ರಾರಂಭಿಸಿರುವುದಾಗಿ ತಿಳಿಸಿದ್ದಾರೆ.

ನಟಿಯ ಪೋಸ್ಟ್​ನಲ್ಲಿ ಏನಿದೆ?

ಪ್ರಸ್ತುತ ನಾನು ಎರಡನೇ ಸುತ್ತಿನ ಕೀಮೋಥೆರಪಿ ಮತ್ತು ಇಮ್ಯೂನೋಥೆರಪಿ ಚಿಕಿತ್ಸೆಗೆ ಒಳಗಾಗುತ್ತಿದ್ದು, ಪ್ರತಿಯೊಂದು ದಿನವನ್ನೂ ಧೈರ್ಯದಿಂದ ಎದುರಿಸುತ್ತಿದ್ದೇನೆ. ಆದಾಗ್ಯೂ, ನೋವಿನಿಂದ ಕೂಡಿರುವ ಭಾರವಾದ ದಿನಗಳನ್ನು ಹೇಗೆ ನಿಭಾಯಿಸಬೇಕೆಂದು ನಾನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ, ಈ ಕಷ್ಟದ ಸಂದರ್ಭದಲ್ಲಿ ಯಾವಾಗಲೂ ನನ್ನ ಬೆಂಬಲಕ್ಕೆ ನಿಂತಿರುವ ಕುಟುಂಬಸ್ಥರಿಗೆ ಹಾಗೂ ಅಪಾರ ಪ್ರೀತಿ ಮತ್ತು ಧೈರ್ಯ ನೀಡುತ್ತಿರುವ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದು, ತಾವು ಚಿಕಿತ್ಸೆಗೆ ಸ್ಪಂದಿಸುತ್ತಾ ಗುಣಮುಖರಾಗುವತ್ತ ಸಂಪೂರ್ಣ ಗಮನವನ್ನು ಹರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ 'CWRC'

Bankipur bypoll: ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಲು ಮುಂದಾದ ಪ್ರಶಾಂತ್‍ಗೆ ಭಾರಿ ಹಿನ್ನಡೆ; BJP ಸೇರಿದ ಕೆಸಿ ಸಿನ್ಹಾ!

FIFA World Cup 2026: ಮೆಸ್ಸಿ-ಅರ್ಜೆಂಟೀನಾಗೆ ಇಂಗ್ಲೆಂಡ್ ದೊಡ್ಡ ಸವಾಲು ಯಾಕೆ ಗೊತ್ತ?; ಇಂದು ಮಧ್ಯರಾತ್ರಿ ನಡೆಯಲಿದೆ ಸೆಮಿ 'ಮಹಾ'ಕದನ!

NDAಯತ್ತ ಶರದ್ ಪವಾರ್ ಚಿತ್ತ? ಏಕನಾಥ್ ಶಿಂಧೆ ಕಚೇರಿಗೆ ಭೇಟಿ 'ಕಾಕತಾಳೀಯ' ಎಂದ ಪುತ್ರಿ!

'ಕಾಪಾಡಿ.. ಪ್ಲೀಸ್ ನನ್ನ ಬದುಕಿಸಿ..' ಎಂದು 40 ನಿಮಿಷ ಕಣ್ಣೀರಿಟ್ಟ ಯುವಕ; ಪೊಲೀಸ್ ಬೂತ್ ಎದುರೇ ರಕ್ತಸ್ರಾವದಿಂದ ಸಾವು!