ಜನನಾಯಗನ್ ಚಿತ್ರದ ದೃಶ್ಯ online desk
ಸಿನಿಮಾ ಸುದ್ದಿ

ತಮಿಳುನಾಡು ಸಿಎಂ ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನನಾಯಗನ್' ಬಿಡುಗಡೆಗೆ ಕೊನೆಗೂ‌ ಮುಹೂರ್ತ ಫಿಕ್ಸ್!

ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಬುಧವಾರ 'ಎಕ್ಸ್' ನಲ್ಲಿ 'ಜನನಾಯಗನ್' ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

ಚೆನ್ನೈ: ತಿಂಗಳುಗಳ ಕಾಲ ಕಾನೂನು ಹೋರಾಟ, ಆನ್‌ಲೈನ್ ನಲ್ಲಿ ಸೋರಿಕೆ ಮತ್ತು ಸೆನ್ಸಾರ್ ಮಂಡಳಿಯೊಂದಿಗಿನ ಭಾರಿ ತಿಕ್ಕಾಟದ ನಂತರ, ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 23 ರಂದು ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್ ಆಗಲಿದೆ.

ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಬುಧವಾರ 'ಎಕ್ಸ್' ನಲ್ಲಿ 'ಜನನಾಯಗನ್' ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಈ ಮೂಲಕ ಅಭಿಮಾನಿಗಳ ತಿಂಗಳುಗಳ ಕಾಯುವಿಕೆಗೆ ಚಿತ್ರತಂಡ ಅಧಿಕೃತವಾಗಿ ತೆರೆ ಎಳೆದಿದೆ.

"ಬೆಂಕಿಯಿಂದ ಪರೀಕ್ಷಿಸಲ್ಪಟ್ಟಿದೆ. ಕಾಲದಿಂದ ರೂಪಿಸಲ್ಪಟ್ಟಿದೆ. ಇತಿಹಾಸಕ್ಕಾಗಿ ನಿರ್ಮಿಸಲಾಗಿದೆ. ಯುದ್ಧ ಕಠಿಣವಾದಷ್ಟೂ ಗೆಲುವು ಜೋರಾಗಿರುತ್ತದೆ. #JanaNayaganFromJuly23, #JanaNayakuduFromJuly23 ಮತ್ತು #JanNetaFromJuly23" ಎಂದು ಕೆವಿಎನ್ ಪ್ರೊಡಕ್ಷನ್ಸ್ ಪೋಸ್ಟ್ ಮಾಡಿದೆ.

ದಳಪತಿ ವಿಜಯ್ ನಟಿಸಿರುವ 'ಜನ ನಾಯಗನ್' ಚಿತ್ರದ ನಿರ್ಮಾಪಕರು, ಈ ಚಿತ್ರವು ಈ ತಿಂಗಳು 23 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರು ಮೂಲದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ 'ಜನ ನಾಯಗನ್' ಚಿತ್ರಕ್ಕೆ ಇತ್ತೀಚೆಗೆ "ಎ" ಪ್ರಮಾಣಪತ್ರ ನೀಡಲಾಗಿತ್ತು.

ಈ ಚಿತ್ರವನ್ನು ಚಿತ್ರವನ್ನು ಖ್ಯಾತ ನಿರ್ದೇಶಕ ಎಚ್.ವಿನೋತ್ ನಿರ್ದೇಶಿಸಿದ್ದು, ಆ್ಯಕ್ಷನ್, ಭಾವನಾತ್ಮಕ ಕಥಾಹಂದರ ಹಾಗೂ ಸಾಮಾಜಿಕ ಸಂದೇಶದೊಂದಿಗೆ ಸಿನಿಮಾ ಮೂಡಿಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್, ಟೀಸರ್ ಮತ್ತು ಹಾಡುಗಳು ಸಿನಿಪ್ರಿಯರ ಗಮನ ಸೆಳೆದಿವೆ.

ರಾಜಕೀಯ ಪ್ರವೇಶದ ಬಳಿಕ ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನನಾಯಗನ್’ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಬಾಲಿವುಡ್ ನಟ ಬಾಬಿ ಡಿಯೋಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಮಮಿತಾ ಬೈಜು ಸೇರಿದಂತೆ ಹಲವು ಖ್ಯಾತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ 'CWRC'

'ಬಿಡದಿ ಟೌನ್‌ಶಿಪ್ ನಮ್ಮ ಯೋಜನೆಯಲ್ಲ'; ರಾಜಕೀಯ ಸಂಚುಗಳಿಂದ ರೈತರ ಬದುಕು ಹಾಳು ಮಾಡಲಾಗುತ್ತಿದೆ: ಸಿಎಂ ಡಿ.ಕೆ. ಶಿವಕುಮಾರ್

ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video

'ನ್ಯಾಯಯುತವಾಗಿದ್ದರೆ ಯಾವುದೇ ಮಸೂದೆಗೆ ನಮ್ಮ ವಿರೋಧವಿಲ್ಲ'; ಅಮಿತ್ ಶಾ ಭೇಟಿ ವಿವರ ಹಂಚಿಕೊಂಡ ಸುಪ್ರಿಯಾ ಸುಳೆ