ಯಶ್ - ರಕುಲ್ ಪ್ರೀತ್ ಸಿಂಗ್ 
ಸಿನಿಮಾ ಸುದ್ದಿ

'ಆ ಪಾತ್ರ ನಿರ್ವಹಿಸಿದ ರೀತಿ...': ನಟಿ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್‌ ಸ್ಟಾರ್‌ ಯಶ್ ಫಿದಾ!

ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಪಾತ್ರದ ಬಗ್ಗೆ ಶ್ಲಾಘಿಸಿದ ಯಶ್.

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ 'ರಾಮಾಯಣ'ದಲ್ಲಿ ಶೂರ್ಪನಖಿ ಪಾತ್ರದಲ್ಲಿ ಅಭಿನಯಿಸಿರುವ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ರಾಕಿಂಗ್‌ ಸ್ಟಾರ್‌ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಶೂರ್ಪನಖಿ ಪಾತ್ರದ ಬಗ್ಗೆ ಶ್ಲಾಘಿಸಿದ ಯಶ್, ಅವರು ಆ ಐಕಾನಿಕ್ ಪಾತ್ರವನ್ನು ನಿರ್ವಹಿಸಿದ ರೀತಿ ನಿಜಕ್ಕೂ ಗಮನಾರ್ಹವಾಗಿದೆ ಎಂದಿದ್ದಾರೆ.

ರಾಮಾಯಣದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಅಭಿನಯವು ಚಿತ್ರ ಬಿಡುಗಡೆಯಾಗುವ ಮೊದಲೇ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್ ಅಭಿನಯವನ್ನು ಬಹಿರಂಗವಾಗಿ ಹೊಗಳಿದ್ದಾರೆ.

ಸಾಮಾನ್ಯವಾಗಿ ಶೂರ್ಪನಖಿ ಪಾತ್ರವನ್ನು ಒಂದೇ ದೃಷ್ಟಿಕೋನದಲ್ಲಿ ತೋರಿಸಲಾಗುತ್ತದೆ. ಆದರೆ, ಈ ಸಿನಿಮಾದಲ್ಲಿ ಆ ಪಾತ್ರವನ್ನು ಹೆಚ್ಚು ಭಾವನಾತ್ಮಕವಾಗಿ ಮತ್ತು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ರಕುಲ್ ಪ್ರೀತ್ ಸಿಂಗ್ ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಹೊಸ ಅರ್ಥ ಕೊಟ್ಟಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಕನ್ನಡ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ಕಚ್ಚಾ ತೈಲ ಆಮದು: ಭಾರತ ಸೇರಿ ಇತರ ದೇಶಗಳ ಮೇಲೆ ಶೇ.100ರಷ್ಟು ಸುಂಕ ಮಸೂದೆಗೆ ಅಮೆರಿಕ ಸಂಸತ್ತಿನಲ್ಲಿ ಮುನ್ನಡೆ

ಶಾಲಾ ಸಹಪಾಠಿ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ; ಬಿಜೆಪಿ ಶಾಸಕನ ಸಂಸ್ಥೆ ಶಾಮೀಲಾಗಿದ್ದ ಕೋಟ್ಯಂತರ ರೂ ಮೌಲ್ಯದ ಭೂಮಿ ವಿವಾದಕ್ಕೆ ಪರಿಹಾರ!

ಗಣಪತಿ ವಿಸರ್ಜನೆ: ಉಲ್ಟಾ ಆರತಿ ಮಾಡಿದ ಸಲ್ಮಾನ್ ಖಾನ್; ಸರಿಪಡಿಸಿದ ತಂಗಿ ಅರ್ಪಿತಾ: ವಿಡಿಯೋ ವೈರಲ್

ಟೆಲಿಪ್ರಾಂಪ್ಟರ್ ಇಲ್ಲದೇ ಬಿಜೆಪಿ ನಾಯಕರು ವಂದೇ ಮಾತರಂ ಪೂರ್ಣ ಹಾಡಿದರೆ ರಾಜೀನಾಮೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಪಾಕಿಸ್ತಾನದಿಂದ ಮತ್ತೊಂದು ಅಪಾಯ: ದೇಶಾದ್ಯಂತ ಅಲರ್ಟ್ ಘೋಷಿಸಿದ ಭಾರತ!