ರಾಮ್ ಚರಣ್ 
ಸಿನಿಮಾ ಸುದ್ದಿ

ಕೊಯಮತ್ತೂರಿನಲ್ಲಿ ನಟ ರಾಮ್ ಚರಣ್ ಗೆ ಸರ್ಜರಿ: ಮೆಗಾ ಪವರ್ ಸ್ಟಾರ್ ಗೆ ಏನಾಯ್ತು ?

ಮಗನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ತಂದೆ ಮೆಗಾಸ್ಟಾರ್ ಚಿರಂಜೀವಿ, ತಾಯಿ ಸುರೇಖಾ, ಪತ್ನಿ ಉಪಾಸನಾ ಹಾಗೂ ಕುಟುಂಬದ ಇತರ ಸದಸ್ಯರು ಕೊಯಮತ್ತೂರಿನ ಆಸ್ಪತ್ರೆಯಲ್ಲಿ ರಾಮ್ ಚರಣ್ ಜೊತೆಯಾಗಲಿದ್ದಾರೆ.

ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಹಿಂದಿನ ಸಿನಿಮಾ ‘ಪೆದ್ದಿ’ ಶೂಟಿಂಗ್ ವೇಳೆ ಸಂಭವಿಸಿದ ಮಣಿಕಟ್ಟಿನ ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ .

ಚಿಕಿತ್ಸೆಗಾಗಿ ಅವರು ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಕೊಯಮತ್ತೂರಿಗೆ ತೆರಳಿದ್ದಾರೆ. ಅಲ್ಲಿನ ಪ್ರಸಿದ್ಧ ಗಂಗಾ ಆಸ್ಪತ್ರೆಯಲ್ಲಿ ನಾಳೆ ಈ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಕೈ ಮತ್ತು ಮಣಿಕಟ್ಟು ಶಸ್ತ್ರಚಿಕಿತ್ಸಾ ತಜ್ಞರು ಈ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.

ಮಗನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ತಂದೆ ಮೆಗಾಸ್ಟಾರ್ ಚಿರಂಜೀವಿ, ತಾಯಿ ಸುರೇಖಾ, ಪತ್ನಿ ಉಪಾಸನಾ ಹಾಗೂ ಕುಟುಂಬದ ಇತರ ಸದಸ್ಯರು ಕೊಯಮತ್ತೂರಿನ ಆಸ್ಪತ್ರೆಯಲ್ಲಿ ರಾಮ್ ಚರಣ್ ಜೊತೆಯಾಗಲಿದ್ದಾರೆ.

‘ಪೆದ್ದಿ’ ಚಿತ್ರದ ಚಿತ್ರೀಕರಣದ ಅವಧಿಯಲ್ಲಿ ರಾಮ್ ಚರಣ್ ಎರಡು ಪ್ರಮುಖ ಗಾಯಗಳಿಗೆ ತುತ್ತಾಗಿದ್ದರು. ಈ ವರ್ಷದ ಆರಂಭದಲ್ಲಿ ಅವರಿಗೆ ಹಣೆ ಭಾಗಕ್ಕೆ ತೀವ್ರ ಗಾಯವಾಗಿದ್ದು, ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಅದರ ಬೆನ್ನಲ್ಲೇ ಶೂಟಿಂಗ್ ವೇಳೆ ಮಣಿಕಟ್ಟಿನ ತೀವ್ರವಾದ ಉಳುಕಿನ ಸಮಸ್ಯೆಯೂ ಅವರನ್ನು ಬಾಧಿಸಿತ್ತು. ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆಯೇ ಶಾಶ್ವತ ಪರಿಹಾರ ಎಂದು ಹೈದರಾಬಾದ್ ವೈದ್ಯರು ಸಲಹೆ ನೀಡಿದ್ದರು. ಹೀಗಾಗಿ ಹಲವು ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ನಂತರ, ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ನಟ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರಕ್ಕೆ ಅಗ್ನಿ ಪರೀಕ್ಷೆ: ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಸೂದೆ ಮಂಡನೆ, ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ಸಜ್ಜು

ಅಕ್ರಮ ಪಾರ್ಕಿಂಗ್, ಬಹಿರಂಗ ಮೂತ್ರವಿಸರ್ಜನೆ; 'ಯೆಲ್ಲೋ ಸ್ಪಾಟ್' ಆದ ಶೇಷಾದ್ರಿ ರಸ್ತೆ?

ಪೋಸ್ಟ್ ಡಿಲೀಟ್ ಮಾಡಲ್ಲ, ಜೈ ಜಗನ್ನಾಥ್- ಜೈ ಹಿಂದ್: BJP ಸಂಸದೆ ಪುತ್ರಿ ಖಡಕ್ ಮಾತು; ವೈರಲ್ ಆದ ಬೆನ್ನಲ್ಲೇ Instagram ನಿಷ್ಕ್ರಿಯ!

CWG 2026: ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ದೇಶದಾದ್ಯಂತ ಸಂಭ್ರಮ, ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!