ಮುಂಬಯಿ: ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ ಒನ್’ ಸಿನಿಮಾದ ಟ್ರೈಲರ್ ಜುಲೈ 31ರಂದು ಬಿಡುಗಡೆಯಾಗಿದೆ.
ಬಿ.ಆರ್. ಚೋಪ್ರಾ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಹಿರಿಯ ನಟ ನಿತೀಶ್ ಭಾರದ್ವಾಜ್ ಹೊಸ ರಾಮಾಯಣ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ರಾಮಾಯಣ ಚಿತ್ರಕ್ಕೆ ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ಶೇ. 100ರಷ್ಟು ಆಸ್ಕರ್ ಪ್ರಶಸ್ತಿ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ ಅವರನ್ನು ಸತ್ಯಜಿತ್ ರೇ ಮತ್ತು ಶೇಖರ್ ಕಪೂರ್ ಅವರಿಗೆ ಹೋಲಿಸಿದ್ದಾರೆ. ನಟ ನಿತೀಶ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರಣಬೀರ್ ಕಪೂರ್ ಈಗ ರಣವೀರ್ ಸಿಂಗ್ ಅವರಷ್ಟೇ ಪ್ರತಿಭಾವಂತ ನಟ ಎಂದು ನಿತೀಶ್ ಹೊಗಳಿದ್ದಾರೆ. ಭಾರತೀಯ ಚಿತ್ರರಂಗದ ಇಬ್ಬರು ಅಜೇಯ ಧುರಂಧರರಲ್ಲಿ ರಣಬೀರ್ ಕೂಡ ಒಬ್ಬರಾಗಿದ್ದಾರೆ ಎಂದಿದ್ದಾರೆ. ಇದೇ ವೇಳೆ ರಾವಣನ ಪಾತ್ರ ಮಾಡಿರುವ ನಟ ಯಶ್ ಅವರನ್ನು ಜಾಗತಿಕ ಚಿತ್ರರಂಗಕ್ಕೆ ಸ್ವಾಗತಿಸಿದ್ದಾರೆ.
ನಟ ರಣಬೀರ್ ಕಪೂರ್ಗೆ ನಿತೀಶ್ ಭಾರದ್ವಾಜ್ ಒಂದು ಕಿವಿಮಾತು ಹೇಳಿದ್ದಾರೆ. ಇನ್ನು ಮುಂದೆ ‘ಅನಿಮಲ್’ ತರಹದ ಸಿನಿಮಾಗಳನ್ನು ಮಾಡಬೇಡಿ ಎಂದು ವಿನಂತಿಸಿದ್ದಾರೆ.
ಕೋಟಿ ಕೋಟಿ ಹಣ ಸಿಕ್ಕರೂ ಇಂತಹ ಚಿತ್ರಗಳಿಂದ ದೂರವಿರಿ ಎಂದಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ಈಗ ರಣಬೀರ್ ಮೇಲಿದೆ ಎಂದು ನೆನಪಿಸಿದ್ದಾರೆ. ಇನ್ನೂ ನಟು ಸಾಯಿ ಪಲ್ಲವಿಯ ಸೀತೆಯ ಪಾತ್ರವನ್ನು ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.