ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

‘ಶಾಶ್ವತ ಅಧ್ಯಾಯನಾದ ಸ್ನೇಹಿತ’: ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ, ‘He Will Be Back Soon’ ಎಂದ ನಟ

ರಕ್ಷಿತ್ ಜೊತೆಗಿನ ಫೋಟೋವನ್ನು ಹಂಚಿಕೊಂಡು "ಹಾದುಹೋಗುವ ಮುಖಗಳ ನಡುವೆ ಶಾಶ್ವತ ಅಧ್ಯಾಯನಾದ ಸ್ನೇಹಿತ" ಎಂದು ಹೇಳಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳು ಮಗಾ.

ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು, ತಮ್ಮ ಆಪ್ತ ಸ್ನೇಹಿತ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಿಷಬ್ ಶೆಟ್ಟಿ ಅವರು, ರಕ್ಷಿತ್ ಜೊತೆಗಿನ ಫೋಟೋವನ್ನು ಹಂಚಿಕೊಂಡು "ಹಾದುಹೋಗುವ ಮುಖಗಳ ನಡುವೆ ಶಾಶ್ವತ ಅಧ್ಯಾಯನಾದ ಸ್ನೇಹಿತ" ಎಂದು ಹೇಳಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳು ಮಗಾ ಎಂದು ಹೇಳಿದ್ದಾರೆ.

ಇದೇ ವೇಳೆ ಮೊನ್ನೆ ತಾನೆ ಮೀಟ್ ಮಾಡ್ಕೊಂಡು ಬಂದೆ ಎಂದು ಹೇಳಿರುವ ಅವರು, ಶೀಘ್ರದಲ್ಲೇ ಹೊಸ ಪ್ರಾಜೆಕ್ಟ್‌ಗಳೊಂದಿಗೆ ಮರಳಲಿದ್ದಾರೆ ಎಂದೂ ತಿಳಿಸಿದ್ದಾರೆ. ಈ ಹೇಳಿಕೆ ಕುತೂಹಲವನ್ನು ಸೃಷ್ಟಿಸಿದೆ.

ಕೆಲ ತಿಂಗಳುಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ರಕ್ಷಿತ್ ಶೆಟ್ಟಿ ಶೀಘ್ರದಲ್ಲೇ ಹೊಸ ಸಿನಿಮಾ ಅಥವಾ ಮಹತ್ವದ ಘೋಷಣೆಯೊಂದಿಗೆ ಅಭಿಮಾನಿಗಳ ಮುಂದೆ ಬರಲಿದ್ದಾರೆಯೇ ಎಂಬ ಪ್ರಶ್ನೆಗಳು ಮೂಡತೊಡಗಿವೆ.

ರಿಷಬ್ ಮತ್ತು ರಕ್ಷಿತ್ ಅವರ ಸ್ನೇಹ ಹಲವು ವರ್ಷಗಳ ಹಿಂದಿನಿಂದಲೂ ಇದ್ದು, ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಯಶಸ್ವಿ ಸ್ನೇಹಿತ ಜೋಡಿಗಳಲ್ಲಿ ಒಂದಾಗಿದೆ.

ಇಬ್ಬರೂ ಸೇರಿ ರಿಕ್ಕಿ, ಕಿರಿಕ್ ಪಾರ್ಟಿ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ, ಕನ್ನಡ ಸಿನಿರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದರು. ವಿಶೇಷವಾಗಿ ಕಿರಿಕ್ ಪಾರ್ಟಿ ಚಿತ್ರದ ಯಶಸ್ಸು ಇವರಿಬ್ಬರ ವೃತ್ತಿಜೀವನದಲ್ಲಿ ಮಹತ್ವದ ತಿರುವು ನೀಡಿತ್ತು.

ಇತ್ತೀಚಿನ ವರ್ಷಗಳಲ್ಲಿ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದರೆ, ರಕ್ಷಿತ್ ಶೆಟ್ಟಿ ತಮ್ಮ ಕನಸಿನ ಯೋಜನೆಗಳಾದ ರಿಚರ್ಡ್ ಆಂಥೋನಿ ಸೇರಿದಂತೆ ಹಲವು ಚಿತ್ರಗಳ ಕೆಲಸದಲ್ಲಿ ನಿರತರಾಗಿದ್ದಾರೆ.

ಇದೇ ಕಾರಣಕ್ಕೆ ರಿಷಬ್ ಅವರ “He Will Be Back Soon” ಎಂಬ ಮಾತು ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಹೋರಾಟಕ್ಕೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್; ಜಂತರ್ ಮಂತರ್‌ಗೆ ಬನ್ನಿ, ಬೆಂಬಲಿಗರಿಗೆ 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ..!

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ ಹೆಚ್ಚಳ..!

ಟ್ರಬಲ್ ಶೂಟರ್ ಡಿಕೆ. ಶಿವಕುಮಾರ್ ಸಂಧಾನ ಯಶಸ್ವಿ?: ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ..!

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!

‘ನೀವು ಇಂಡಿಯಾದವರಾ?’: ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ, ಭಾರೀ ವಿವಾದ

SCROLL FOR NEXT