ಆರ್. ಮಾಧವನ್ ಹಾಗೂ ಸರಿತಾ 
ಸಿನಿಮಾ ಸುದ್ದಿ

'ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ, ಆದರೂ...': ಸುದೀರ್ಘ ದಾಂಪತ್ಯದ ರಹಸ್ಯ ಬಿಚ್ಚಿಟ್ಟ ಆರ್. ಮಾಧವನ್

ಜೂನ್ 6 ರಂದು ಸರಿತಾ ಅವರೊಂದಿಗೆ 27ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ನಟ ಮಾಧವನ್ ಅವರು, ತಮ್ಮ ವೈವಾಹಿಕ ಜೀವನ ಮತ್ತು ಖ್ಯಾತಿಯನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡಿದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಖ್ಯಾತ ನಟ ಆರ್. ಮಾಧವನ್ ಅವರು ಪತ್ನಿ ಸರಿತಾ ಅವರೊಂದಿಗಿನ 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನದ ಯಶಸ್ಸಿನ ರಹಸ್ಯವನ್ನು ಬಿಚ್ಚಿಟ್ಟಿದ್ದು, ಚಿತ್ರರಂಗದಲ್ಲಿ ದಶಕಗಳನ್ನು ಕಳೆದ ನಂತರವೂ ಲಾಯಲಿಟಿ(ನಿಷ್ಠೆ) ತನಗೆ ಎಂದಿಗೂ ಸವಾಲಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.

ಜೂನ್ 6 ರಂದು ಸರಿತಾ ಅವರೊಂದಿಗೆ 27ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ನಟ ಮಾಧವನ್ ಅವರು, ತಮ್ಮ ವೈವಾಹಿಕ ಜೀವನ ಮತ್ತು ಖ್ಯಾತಿಯನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡಿದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪತ್ನಿ ಸರಿತಾ ಅವರಿಗೆ ಎಂದಿಗೂ ಮೋಸ ಮಾಡಿಲ್ಲ ಎಂದು ಮಾಧವನ್ ಹೇಳಿದ್ದಾರೆ.

“ನಿಷ್ಠೆ ಎಂಬುದು ನಮ್ಮ ಕುಟುಂಬದಿಂದ ಬಂದ ಮೌಲ್ಯ. ನಾನು ಅತ್ಯಂತ ಆಕರ್ಷಕ ನಟಿಯರ ಜೊತೆ ಕೆಲಸ ಮಾಡಿದ್ದೇನೆ. ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ. ಆದರೆ ದಿನದ ಕೊನೆಯಲ್ಲಿ ಮನೆಗೆ ಹೋಗಿ ನನ್ನ ಪತ್ನಿಯೊಂದಿಗೆ ಸಮಯ ಕಳೆಯುವುದನ್ನೇ ಆಯ್ಕೆ ಮಾಡುತ್ತೇನೆ” ಎಂದು ಮಾಧವನ್ ತಿಳಿಸಿದ್ದಾರೆ.

ತಮ್ಮ ಫೋನ್ ಹಾಗೂ ಹಣಕಾಸಿನ ವ್ಯವಹಾರಗಳ ಬಗ್ಗೆ ಪತ್ನಿಗೆ ಸಂಪೂರ್ಣ ಮಾಹಿತಿ ಇದೆ ಎಂದೂ ಅವರು ತಿಳಿಸಿದ್ದಾರೆ.

ಮಾಧವನ್ ಮತ್ತು ಸರಿತಾ 1999ರಲ್ಲಿ ವಿವಾಹವಾಗಿದ್ದು, ಈ ದಂಪತಿಗೆ ವೇದಾಂತ್ ಮಾಧವನ್ ಎಂಬ ಪುತ್ರನಿದ್ದಾರೆ. ನಟನ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಅವರ ದಾಂಪತ್ಯ ಜೀವನದ ಬಗ್ಗೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!