ಗಿಲ್ಲಿ ನಟ 
ಸಿನಿಮಾ ಸುದ್ದಿ

Bigg Boss ವಿನ್ನರ್ ಗಿಲ್ಲಿ ನಟಗೆ ಜಾಕ್‌ಪಾಟ್; KVN ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಹೀರೋ ಆಗಿ ಭರ್ಜರಿ ಲಾಂಚ್..!

ಬಿಗ್ ಬಾಸ್ ವೇದಿಕೆಯಲ್ಲಿ ತಮ್ಮ ವ್ಯಕ್ತಿತ್ವ ಮತ್ತು ಪ್ರತಿಭೆಯ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಅವರು, ಇದೀಗ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿಜೇತರಾಗಿ ಗಮನ ಸೆಳೆದಿದ್ದ ಗಿಲ್ಲಿ ನಟ ಇದೀಗ ಬೆಳ್ಳಿತೆರೆಯಲ್ಲಿ ನಾಯಕ ನಟನಾಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಬಿಗ್ ಬಾಸ್ ವೇದಿಕೆಯಲ್ಲಿ ತಮ್ಮ ವ್ಯಕ್ತಿತ್ವ ಮತ್ತು ಪ್ರತಿಭೆಯ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಅವರು, ಇದೀಗ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಗಿಲ್ಲಿ ನಟನನ್ನು ನಾಯಕನಾಗಿ ಪರಿಚಯಿಸುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಹಲವು ಯಶಸ್ವಿ ಹಾಗೂ ಭಾರಿ ಬಜೆಟ್ ಸಿನಿಮಾಗಳನ್ನು ನೀಡಿರುವ ಕೆವಿಎನ್ ಪ್ರೊಡಕ್ಷನ್ಸ್, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ.

ಜೂನ್ 21ರಂದು ಮುಹೂರ್ತ

ಈ ಬಹುನಿರೀಕ್ಷಿತ ಚಿತ್ರದ ಮುಹೂರ್ತ ಸಮಾರಂಭ ಜೂನ್ 21ರಂದು ನಡೆಯಲಿದ್ದು, ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಬಿಗ್ ಬಾಸ್ ಟ್ರೋಫಿ ಗೆದ್ದ ಕೆಲವೇ ದಿನಗಳಲ್ಲಿ ಗಿಲ್ಲಿ ನಟ ದೊಡ್ಡ ಬ್ಯಾನರ್‌ನ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ.

ಚಿತ್ರವನ್ನು ಚಂದ್ರ ಮೋಹನ್ ನಿರ್ದೇಶನ ಮಾಡಲಿದ್ದು, ಕೆವಿಎನ್ ಪ್ರೊಡಕ್ಷನ್ಸ್‌ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಹಾಗೂ ಹರೀಶ್ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸಂಸ್ಥಾಪಕ ಕೆ. ವೆಂಕಟ ನಾರಾಯಣ ಹಾಗೂ ಸಂಸ್ಥೆಯ ಬಿಸಿನೆಸ್ ಹೆಡ್ ಸುಪ್ರಿತ್ ಅವರ ಬೆಂಬಲವೂ ಈ ಯೋಜನೆಗೆ ಸಿಕ್ಕಿದೆ.

ಚಿತ್ರದ ಶೀರ್ಷಿಕೆ, ನಾಯಕಿ ಹಾಗೂ ಇತರೆ ತಾರಾಗಣದ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇದೆ. ಗಿಲ್ಲಿ ನಟನ ಈ ಹೊಸ ಸಿನಿಮಾ ಪಯಣದ ಬಗ್ಗೆ ಸಿನಿಪ್ರಿಯರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!

ಬೆಳಗಾವಿಗೆ ಮತ್ತೆ ನಿರಾಸೆ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬ್ರೇಕ್..?

RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು

ಡಿಕೆಶಿ ಸಿಎಂ ಆಗಿರುವುದಕ್ಕೆ ಗೌಡರ ಕುಟುಂಬಕ್ಕೆ ಹೊಟ್ಟೆಕಿಚ್ಚು: ಮತ್ತೊಬ್ಬ ಒಕ್ಕಲಿಗ ನಾಯಕ ಬೆಳೆಯಬಾರದೆಂದು ಕುತಂತ್ರ!

'ಮೋದಿಯವ್ರೇ ನಿಮ್ಮನ್ನು ಮತ್ತೆ ನೋಡಿ ಖುಷಿ ಆಯ್ತು,ನಾವಿಬ್ರು ಇನ್ಸ್ಟಾಗ್ರಾಂನಲ್ಲಿ ಎಷ್ಟು ಫೇಮಸ್ ಗೊತ್ತಾ'?: Melody ಟ್ರೆಂಡ್ ಬಗ್ಗೆ ಜೋಕ್ ಮಾಡಿದ ಮೆಲೋನಿ-Viral Video

SCROLL FOR NEXT