ಗಾಯಕ ಸೋನು ನಿಗಮ್ 
ಸಿನಿಮಾ ಸುದ್ದಿ

‘ಅತೀವ್ರ ನೋವಿದೆ ಆದರೆ, ಹಾಡುವುದು ನಿಲ್ಲಿಸಲ್ಲ’; ಆರೋಗ್ಯ ಸಮಸ್ಯೆ ಬಹಿರಂಗಪಡಿಸಿದ ಗಾಯಕ ಸೋನು ನಿಗಮ್

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ತಮ್ಮ ಪ್ರಸ್ತುತ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ವಿವರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಎದುರಾಗಿದ್ದು, ನರಗಳ ಸಮಸ್ಯೆಯಿಂದ ಬಳಲುತ್ತಿದ್ದರೂ ತಮ್ಮ ಮುಂಬರುವ ಲೈವ್ ಶೋಗಳನ್ನು ರದ್ದುಗೊಳಿಸದಿರಲು ನಿರ್ಧರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ತಮ್ಮ ಪ್ರಸ್ತುತ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ವಿವರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವೈದ್ಯರು ನನ್ನ ಆರೋಗ್ಯ ಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ. “ನನ್ನ ನರಗಳು ಒತ್ತಡಕ್ಕೆ ಸಿಲುಕಿವೆ (Pinched Nerves). ಕಳೆದ ಒಂದು ವಾರದಿಂದ MRI ಮತ್ತು CT ಸ್ಕ್ಯಾನ್‌ಗಳನ್ನು ಮಾಡಿಸಿಕೊಳ್ಳುತ್ತಿದ್ದೇನೆ. ಸಾಕಷ್ಟು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಚಿಕಿತ್ಸೆಯ ಭಾಗವಾಗಿ ಫಿಸಿಯೋಥೆರಪಿಯನ್ನೂ ಪಡೆಯುತ್ತಿರುವುದಾಗಿ ಹೇಳಿದ ಗಾಯಕ, ಆ ಪ್ರಕ್ರಿಯೆ ತುಂಬಾ ನೋವಿನಿಂದ ಕೂಡಿದೆ ಎಂದು ವಿವರಿಸಿದ್ದಾರೆ.

“ಫಿಸಿಯೋಥೆರಪಿ ಬಹಳ ನೋವಿನ ಅನುಭವವಾಗಿದೆ. ಈಗ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೇನೆ,” ಎಂದು ತಿಳಿಸಿದ್ದಾರೆ.

ನನ್ನ ಧ್ವನಿಯ ಮೇಲೂ ಚಿಕಿತ್ಸೆಯ ಪರಿಣಾಮ ಬಿದ್ದಿದೆ. ಸ್ನಾಯುಗಳನ್ನು ಸಡಿಲಗೊಳಿಸಲು ನೀಡಲಾಗುತ್ತಿರುವ ಔಷಧಿಗಳಿಂದ ಗಂಟಲು ಭಾರವಾದಂತಾಗಿದೆ ಎಂದು ಹೇಳಿದ್ದಾರೆ.

ಆರೋಗ್ಯ ಸಮಸ್ಯೆಯ ನಡುವೆಯೂ ಕಾರ್ಯಕ್ರಮಕ್ಕೆ ಸಜ್ಜು

ಈ ನಡುವೆ ತಮ್ಮ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಸುಧಾರಿಸದಿದ್ದರೂ, ಅಭಿಮಾನಿಗಳ ನಿರೀಕ್ಷೆಯನ್ನು ನಿರಾಸೆಗೊಳಿಸಲು ಇಷ್ಟವಿಲ್ಲ ಎಂದಿರುವ ಗಾಯಕ, ದೀರ್ಘ ವಿರಾಮದ ಬಳಿಕ ಮುಂಬೈನಲ್ಲಿ ಕಾರ್ಯಕ್ರಮ ನೀಡುತ್ತಿರುವುದರಿಂದ ಅದನ್ನು ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಪರಿಸ್ಥಿತಿಯಿಂದ ನನ್ನ ಆತ್ಮವಿಶ್ವಾಸ ಸ್ವಲ್ಪ ಕುಂದಿದೆ. ಆದರೂ ಕಾರ್ಯಕ್ರಮ ನಡೆಸಲು ನಾನು ಸಂಪೂರ್ಣ ಸಿದ್ಧನಿದ್ದೇನೆ,” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!

ಜಿ 7 ಸಭೆ: ಸಂಬಂಧಗಳಲ್ಲಿನ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಪರಸ್ಪರ ಶುಭಾಶಯ ವಿನಿಮಯ; ಜೂ.17 ರಂದು ದ್ವಿಪಕ್ಷೀಯ ಸಭೆ

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video

ಸಿಎಂ ಡಿಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್. ಶ್ರೀಧರ್ ನೇಮಕ

'ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ ಹಲವು ವರ್ಷಗಳಷ್ಟು ಮುಂದಿದೆ': ಸ್ಲೋವೇನಿಯಾದ ಪ್ರವಾಸಿ ಮಹಿಳೆ ಮೆಚ್ಚುಗೆ

SCROLL FOR NEXT