ನಿವೇದಿತಾ ಗೌಡ, ಕಿಶನ್ 
ಸಿನಿಮಾ ಸುದ್ದಿ

ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ ಗೌಡ, ಕಿಶನ್; ತನಿಖೆಗೂ ಸಹಕಾರ ಎಂದ ನಟಿ

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿದ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ಕಿಶನ್ ಹಾಗೂ ನಿವೇದಿತಾ ಗೌಡ ಅವರ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ.

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ರೀಲ್ಸ್ ಮಾಡಲು ನವಿಲುಗರಿ ಬಳಕೆ ಮಾಡುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಇಬ್ಬರೂ ರೀಲ್ಸ್ ಡಿಲೀಟ್ ಮಾಡಿ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನಿವೇದಿತಾ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವನ್ಯಜೀವಿ ವಸ್ತುಗಳನ್ನು ಅಥವಾ ಗರಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಮತ್ತು ಅದರಿಂದ ವಿಡಿಯೋ ಮಾಡುವುದು ಕಾನೂನು ಬಾಹಿರ. ಇದು ತಪ್ಪು ತಿಳುವಳಿಕೆಯಿಂದ ಮಾಡಿದ ವಿಡಿಯೋ. ಬೇರೆ ಯಾರೂ ಕೂಡ ಈ ರೀತಿಯ ವನ್ಯಜೀವಿ ವಸ್ತುಗಳನ್ನು ಬಳಸಿ ವಿಡಿಯೋ ಮಾಡಬೇಡಿ ಎಂದು ವಿನಂತಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಸದ್ಯ ನಡೆಯುತ್ತಿರುವ ಅರಣ್ಯ ಇಲಾಖೆಯ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ನೋಟಿಸ್ ನೀಡಿದ ಬಳಿಕ ಕಿಶನ್ ವಿಡಿಯೋ ಬಿಡುಗಡೆ ಮಾಡಿ ತಪ್ಪೊಪ್ಪಿಕೊಂಡಿದ್ದಾರೆ. ವಿಡಿಯೋ ಮಾಡುವ ವೇಳೆ ಇದು ಕಾನೂನುಬಾಹಿರ ಎಂಬ ಮಾಹಿತಿ ನಮಗೆ ಇರಲಿಲ್ಲ. ಹಲವು ತಂಡಗಳು ಸೇರಿ ಈ ಕೊಲಾಬರೇಷನ್ ವಿಡಿಯೋ ಮಾಡಿದ್ದೆವು. ಬಳಸಿದ ನವಿಲು ಗರಿಗಳನ್ನು ಬಾಡಿಗೆಗೆ ಪಡೆದಿದ್ದೆವು ಎಂದು ಹೇಳಿದ್ದಾರೆ.

ಇನ್ನು, ನಾನು ಒಬ್ಬ ಇನ್‌ಫ್ಲುಯೆನ್ಸರ್ ಆಗಿರುವುದರಿಂದ ಜನರಿಗೆ ತಪ್ಪು ಸಂದೇಶ ಹೋಗಬಾರದು. ಅದಕ್ಕಾಗಿ ವಿಡಿಯೋವನ್ನು ಅಳಿಸಿದ್ದೇನೆ. ಯಾರೂ ಕೂಡ ನವಿಲು ಗರಿಗಳನ್ನು ಬಳಸಬೇಡಿ ಎಂದು ಮನವಿ ಮಾಡಿದ್ದಾರೆ.

ಸದಾ ರೀಲ್ಸ್‌ನಲ್ಲಿ ಮಿಂಚುವ ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು ಶಂಕೆ, ರಕ್ಷಣಾ ಕಾರ್ಯ ಆರಂಭ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

'ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ': ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ