ಶರ್ಮಿಳಾ ಮಾಂಡ್ರೆ ಸುಧನ್ ಸುಂದರಂ ವಿವಾಹ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ವಿವಾಹ ನಿಶ್ಚಿತಾರ್ಥ, ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾವಣೆ

ಸಮಾರಂಭವನ್ನು ಸಂಪೂರ್ಣ ಖಾಸಗಿಯಾಗಿ ನಡೆಸಲು ನಿರ್ಧರಿಸಿದ್ದ ಜೋಡಿ, ಮಾಧ್ಯಮಗಳ ಪ್ರವೇಶಕ್ಕೂ ಅವಕಾಶ ನೀಡಿರಲಿಲ್ಲ.

ಬೆಂಗಳೂರು: ಕನ್ನಡ ನಟಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಪರಸ್ಪರ ಉಂಗುರ ಬದಲಾಯಿಸಿಕೊಂಡು ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಖ್ಯಾತ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭವು ಪೂಜೆಯೊಂದಿಗೆ ಆರಂಭಗೊಂಡಿತು. ಈ ಪೂಜೆಯಲ್ಲಿ ವಧು-ವರರ ಕುಟುಂಬದ ಆಪ್ತ ಸದಸ್ಯರು ಮಾತ್ರ ಭಾಗವಹಿಸಿದ್ದರು. ಸಮಾರಂಭವನ್ನು ಸಂಪೂರ್ಣ ಖಾಸಗಿಯಾಗಿ ನಡೆಸಲು ನಿರ್ಧರಿಸಿದ್ದ ಜೋಡಿ, ಮಾಧ್ಯಮಗಳ ಪ್ರವೇಶಕ್ಕೂ ಅವಕಾಶ ನೀಡಿರಲಿಲ್ಲ.

ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಹಂಚಿಕೊಳ್ಳಲಾಗಿದ್ದು, ಶರ್ಮಿಳಾ ಮತ್ತು ಸುಧನ್ ಸುಂದರಂ ಪರಸ್ಪರ ಉಂಗುರ ಬದಲಾಯಿಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ.

ನಿಶ್ಚಿತಾರ್ಥ ಸಮಾರಂಭದಲ್ಲಿ ಶರ್ಮಿಳಾ ಮತ್ತು ಸುಧನ್ ಇಬ್ಬರೂ ಐವರಿ (ಬಿಳಿ-ಕ್ರೀಮ್) ಬಣ್ಣದ ಉಡುಪುಗಳಲ್ಲಿ ಕಾಣಿಸಿಕೊಂಡು ಸರಳತೆ ಹಾಗೂ ಸೊಬಗಿನಿಂದ ಗಮನ ಸೆಳೆದರು.

ನಿಶ್ಚಿತಾರ್ಥದ ಬಳಿಕ ಮದುವೆಯ ಸಿದ್ಧತೆಗಳು ಆರಂಭವಾಗಿದ್ದು, ಮದುವೆಯ ದಿನಾಂಕ ಹಾಗೂ ಸ್ಥಳವನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

"ಇದು ಡೆಸ್ಟಿನೇಶನ್ ವೆಡ್ಡಿಂಗ್ ಆಗಿರಲಿದೆ. ಸುಂದರ, ಕನಸಿನಂತಿರುವ ಹಾಗೂ ಶೈಲಿಯುತ ಮದುವೆಯಾಗಬೇಕು ಎಂಬುದು ಶರ್ಮಿಯೆಲಾ ಅವರ ಆಸೆ" ಎಂದು ದಂಪತಿಗೆ ಆಪ್ತವಾಗಿರುವ ಮೂಲಗಳು ತಿಳಿಸಿವೆ.

ಕೆಲವೇ ದಿನಗಳ ಹಿಂದೆ ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸಿದ್ಧರಾಗಿರುವುದಾಗಿ ಶರ್ಮಿಳಾ ಮಾಂಡ್ರೆ ತಿಳಿಸಿದ್ದರು. "ನಾವು ಕೆಲ ಸಮಯದಿಂದ ಒಬ್ಬರಿಗೊಬ್ಬರು ಪರಿಚಿತರಾಗಿದ್ದೇವೆ. ಈಗ ನಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸಿದ್ಧರಾಗಿದ್ದೇವೆ" ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನ ತ್ರೀ ಲೇನ್ ಸುರಂಗ ರಸ್ತೆ ಕಾಮಗಾರಿ: ಗುದ್ದಲಿ ಪೂಜೆ ನೆರವೇರಿಸಿದ CM ಡಿ ಕೆ ಶಿವಕುಮಾರ್, ಇದರ ವೈಶಿಷ್ಟ್ಯತೆಯೇನು?-Video

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ಬಂಗಾಳ ವಿಧಾನಸಭೆಯಲ್ಲಿ ಯುಸಿಸಿ ಮಸೂದೆ ಮಂಡನೆಗೆ ಬಿಜೆಪಿ ಸರ್ಕಾರ ಸಜ್ಜು!

RSS ಯಾರ ಬಳಿಯೂ ಕೈಚಾಚುವುದು ಬೇಡ, ನೋಂದಣಿ ಶುಲ್ಕ ಬೇಕಿದ್ದರೆ ನಾನೇ ಕಟ್ಟುತ್ತೇನೆ: ಪ್ರಿಯಾಂಕ್ ಖರ್ಗೆ

ರಾಮ ಮಂದಿರ ನಿಧಿ ಹಗರಣ: "ನಮ್ಮ ಬೆಂಬಲ ಅವರಿಗೆ ಇಲ್ಲ"; ಆರೋಪಿಗಳ ವಿರುದ್ಧ ಕುಟುಂಬದವರ ತೀವ್ರ ಅಸಮಾಧಾನ