ಸೋನು ಶ್ರೀನಿವಾಸ್ ಗೌಡ 
ಸಿನಿಮಾ ಸುದ್ದಿ

ಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video

ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಸ್ ಮೂಲಕವೇ ಹೆಚ್ಚು ಗುರುತಿಸಿಕೊಂಡಿರುವ ಸೋನು ಶ್ರೀನಿವಾಸ್ ಗೌಡ ಮೊದಲ ಬಾರಿಗೆ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಹೌದು. ಸೋನು ಶ್ರೀನಿವಾಸ್ ಗೌಡ ಅವರ‘ಕೇಕೆ' ಚಿತ್ರದ ಐಟಂ ಹಾಡನ್ನು (Item song) ಇಂದು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಲೋಕಾರ್ಪಣೆ ಮಾಡಲಾಯಿತು. ಈ ಚಿತ್ರವನ್ನು ಸೋಮಶೇಖರ್ ಜಿ.ಕೆ. ನಿರ್ದೇಶಿಸಿದ್ದು, ರಮಾಲಿ ನಾಯ್ಕ್ ಮತ್ತು ಕಲ್ಯಾಣ್ (ಬಳ್ಳಾರಿ-ಹೊಸಪೇಟೆ) ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದು, ಆಲಾಪನಾ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಆಲಾಪನಾ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಹಾಡು ವೀಕ್ಷಣೆಗೆ ಲಭ್ಯವಿದೆ. ‘ಗುಂಟೂರು ಅಮ್ಮಾಯಿ’ ಸಾಂಗ್ ತೆಲುಗು ಮಿಶ್ರಿತ ಕನ್ನಡ ಹಾಡಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಚಾರಗಳಿಗೆ ವೈರಲ್ ಆಗಿದ್ದ ಸೋನು ಶ್ರೀನಿವಾಸ್ ಗೌಡ (Sonu Sinivas Gowda) ಈ ಹಾಡಿಗೆ ಹೆಜ್ಜೆ ಹಾಕಿರುವುದು ವಿಶೇಷ.

‘ಗುಂಟೂರು ಅಮ್ಮಾಯಿ’ ಹಾಡಿನ ಬಿಡುಗಡೆಯೊಂದಿಗೆ ಸೋನು ಅವರ ಹುಟ್ಟುಹಬ್ಬವನ್ನೂ ಚಿತ್ರತಂಡ ಆಚರಿಸಿತು. ‘ಕೇಕೆ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಚಿತ್ರದ ಇನ್ನಿತರ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ