ಸೋನು ಶ್ರೀನಿವಾಸ್ ಗೌಡ 
ಸಿನಿಮಾ ಸುದ್ದಿ

ಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video

ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಸ್ ಮೂಲಕವೇ ಹೆಚ್ಚು ಗುರುತಿಸಿಕೊಂಡಿರುವ ಸೋನು ಶ್ರೀನಿವಾಸ್ ಗೌಡ ಮೊದಲ ಬಾರಿಗೆ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಹೌದು. ಸೋನು ಶ್ರೀನಿವಾಸ್ ಗೌಡ ಅವರ‘ಕೇಕೆ' ಚಿತ್ರದ ಐಟಂ ಹಾಡನ್ನು (Item song) ಇಂದು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಲೋಕಾರ್ಪಣೆ ಮಾಡಲಾಯಿತು. ಈ ಚಿತ್ರವನ್ನು ಸೋಮಶೇಖರ್ ಜಿ.ಕೆ. ನಿರ್ದೇಶಿಸಿದ್ದು, ರಮಾಲಿ ನಾಯ್ಕ್ ಮತ್ತು ಕಲ್ಯಾಣ್ (ಬಳ್ಳಾರಿ-ಹೊಸಪೇಟೆ) ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದು, ಆಲಾಪನಾ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಆಲಾಪನಾ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಹಾಡು ವೀಕ್ಷಣೆಗೆ ಲಭ್ಯವಿದೆ. ‘ಗುಂಟೂರು ಅಮ್ಮಾಯಿ’ ಸಾಂಗ್ ತೆಲುಗು ಮಿಶ್ರಿತ ಕನ್ನಡ ಹಾಡಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಚಾರಗಳಿಗೆ ವೈರಲ್ ಆಗಿದ್ದ ಸೋನು ಶ್ರೀನಿವಾಸ್ ಗೌಡ (Sonu Sinivas Gowda) ಈ ಹಾಡಿಗೆ ಹೆಜ್ಜೆ ಹಾಕಿರುವುದು ವಿಶೇಷ.

‘ಗುಂಟೂರು ಅಮ್ಮಾಯಿ’ ಹಾಡಿನ ಬಿಡುಗಡೆಯೊಂದಿಗೆ ಸೋನು ಅವರ ಹುಟ್ಟುಹಬ್ಬವನ್ನೂ ಚಿತ್ರತಂಡ ಆಚರಿಸಿತು. ‘ಕೇಕೆ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಚಿತ್ರದ ಇನ್ನಿತರ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

"ಎರಡೇ ನಿಮಿಷ ಅಷ್ಟೇ": ಕಾರಿನಲ್ಲೇ ಸೆಕ್ಸ್​​ಗೆ ಒತ್ತಾಯಿಸಿದ ಕಾಮುಕ; ವಿಡಿಯೋ ಮಾಡಿದ ಯುವತಿ!

ಮಂಗಳೂರು: ಸಮುದ್ರದಲ್ಲಿ ಬಿರುಗಾಳಿಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಿಂದ 6 ಮೀನುಗಾರರ ರಕ್ಷಣೆ! Video

ರಾಜಕೀಯ ನಾಯಕರ ಮಾತಿನಿಂದ ಆತಂಕ ಸೃಷ್ಟಿಯಾಗಿದ್ದು SIR ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ