ನಟಿ ಸಪ್ತಮಿ ಗೌಡ 
ಸಿನಿಮಾ ಸುದ್ದಿ

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಣ: ಪಾಪರಾಜಿ, ಯೂಟ್ಯೂಬರ್‌ಗಳ ವಿರುದ್ಧ ನಟಿ ಸಪ್ತಮಿ ಗೌಡ ಕಿಡಿ

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪರಿಪಾಠ ಚಾಲ್ತಿಯಲ್ಲಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವುದು ಮತ್ತು ಅವುಗಳಿಗೆ ಅಸಭ್ಯವಾಗಿ ಕಮೆಂಟ್ ಮಾಡುವುದರ ವಿರುದ್ಧ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಕಿಡಿಕಾರಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೊಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ಅವರ ಕಲೆಗಿಂತಲೂ ಅವರ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪದೇ ಪದೆ ನಡೆಯುತ್ತಿವೆ ಎಂದು ದೂರಿದರು.

ಕೆಲವರಿಂದ ಇಂತಹ ವರ್ತನೆಗಳು ನಡೆಯುತ್ತಿದ್ದರೂ, ಇದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ನಾವು ಇಲ್ಲಿ ಕಲೆಯನ್ನು ನಂಬಿ, ಸಿನಿಮಾ ಮಾಡಲು ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡಿ, ಅಸಭ್ಯ ಕೋನಗಳಿಂದ ನಟಿಯರನ್ನು ಚಿತ್ರೀಕರಿಸುವುದು ನಮ್ಮ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಸಹಿಸಲು ಆಗುವುದಿಲ್ಲ ಎಂದಿದ್ದಾರೆ.

ಯಾವುದೇ ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕೆಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿ ರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೆ ನಾವು ಒಟ್ಟಾಗಿ ನಿಂತಿದ್ದೇವೆ. ಗೌರವ ನೀಡುವಂತೆ ಒತ್ತಾಯಿಸುವ ನಮ್ಮ ಧ್ವನಿ ಮುಂದುವರಿಯುತ್ತದೆ ಎಂದು ಸಪ್ತಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!