ರಶ್ಮಿಕಾ-ವಿಜಯ್ ರಿಸೆಪ್ಷನ್ ನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ  
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಗ್ರ್ಯಾಂಡ್ ರಿಸೆಪ್ಷನ್ ನಲ್ಲಿ ಡಿ ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗಿ-Photos

ಮಾರ್ಚ್ 4ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನ ತಾಜ್ ಕೃಷ್ಣ ಹೊಟೇಲ್ ನಲ್ಲಿ ಅದ್ದೂರಿ ಆರತಕ್ಷತೆ ಮಾಡಿಕೊಂಡರು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಂಪತಿ.

ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಸಾಂಪ್ರದಾಯಿಕ ತೆಲುಗು ಮತ್ತು ಕೊಡವ ವಿಧಿವಿಧಾನಗಳೊಂದಿಗೆ ತೀರಾ ಖಾಸಗಿಯಾಗಿ ವಿವಾಹವಾದ ನಂತರ ಮಾರ್ಚ್ 4ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನ ತಾಜ್ ಕೃಷ್ಣ ಹೊಟೇಲ್ ನಲ್ಲಿ ಅದ್ದೂರಿ ಆರತಕ್ಷತೆ ಮಾಡಿಕೊಂಡರು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಂಪತಿ.

ಇಬ್ಬರ ಉಡುಗೆಗಳು ಅವರವರ ರಾಜ್ಯವನ್ನು ಪ್ರತಿನಿಧಿಸುತ್ತಿತ್ತು. ನಟಿ ರಶ್ಮಿಕಾ, ಮೈಸೂರು ರೇಷ್ಮೆ ಸೀರೆ ಧರಿಸಿದ್ದರೆ ವಿಜಯ್ ದೇವರಕೊಂಡ ತೆಲಂಗಾಣದ ಸಾಂಪ್ರದಾಯಿಕ ಪಂಚೆ, ಶಲ್ಯ ಧರಿಸಿದ್ದರು.ವಿಜಯ್ ದೇವರಕೊಂಡ ಅವರು ಸಾಂಪ್ರದಾಯಿಕ ಸಿಲ್ವರ್ ಬಾರ್ಡರ್ ವೆಸ್ಟಿ ಮತ್ತು ವಿ ನೆಕ್ ಅರ್ಧ ತೋಳಿನ ಶರ್ಟ್ ಧರಿಸಿದ್ದರು. ರಶ್ಮಿಕಾ ಗಾಢ ಕೆಂಪು ಮೈಸೂರು ರೇಷ್ಮೆ ಸೀರೆಯನ್ನು ಧರಿಸಿದ್ದರು. ಬಾರ್ಡರ್ ನಲ್ಲಿ ಚಿನ್ನದ ಝರಿಯ ಕುಸುರಿಯಿತ್ತು.

ಹಲವು ಬಾಲಿವುಡ್-ಕಾಲಿವುಡ್ ತಾರೆಯರು ಆಗಮಿಸಿ ಸಮಾರಂಭಕ್ಕೆ ಮೆರುಗು ತುಂಬಿದರು.

ಕುರ್ತಾ ಧರಿಸಿ ಬಂದ ಅಲ್ಲು ಅರ್ಜುನ್ ಜೋಡಿಗೆ ಮನತುಂಬಿ ವಿಶ್ ಮಾಡಿ ಫೋಟೋಗೆ ಫೋಸ್ ಕೊಟ್ಟರು.

ಹೂಗುಚ್ಛದೊಂದಿಗೆ ಆಗಮಿಸಿದ ರಾಮ್ ಚರಣ್ ದಂಪತಿ, ಮಹೇಶ್ ಬಾಬು ಕುಟುಂಬ ಸಹ ಮನಸ್ಪೂರ್ತಿ ಹಾರೈಸಿದರು.

ರಾಜಕೀಯ ವಲಯದಿಂದ ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ತೆಲಂಗಾಣ ಮಾಜಿ ಸಚಿವ ಕೆ ಟಿ ರಾಮ ರಾವ್ ಹಾಜರಿದ್ದರು.

ಬಾಲಿವುಡ್‌ ನಿಂದ ಕರಣ್ ಜೋಹರ್, ಕೃತಿ ಸನೋನ್ ಕೂಡ ಹಾಜರಿದ್ದರು.


ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಹಂಚಿಕೊಂಡ ಕ್ಷಣಗಳು ವೈರಲ್ ಆಗಿದ್ದು, ರಶ್ಮಿಕಾ ವಿಜಯ್ ಅವರನ್ನು “ನನ್ನ ಗಂಡ” ಎಂದು ಕರೆಯುವ ದೃಶ್ಯಗಳಿಂದ ಹಿಡಿದು, ಪರಸ್ಪರ ಸಿಹಿ ತಿನ್ನಿಸುವ ಮಧುರ ಕ್ಷಣಗಳವರೆಗೆ ಎಲ್ಲವೂ ಗಮನ ಸೆಳೆದವು.

ರಶ್ಮಿಕಾ ಮಂದಣ್ಣ ಬಹುತೇಕ ತಾಯಿ ರೀತಿಯಲ್ಲೇ ಇದ್ದಾರೆ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ರಶ್ಮಿಕಾ ಅವರ ಸಹೋದರಿ ಶಿಮಾನ್ ಮಂದಣ್ಣ ಕೂಡ ಗಮನ ಸೆಳೆದರು.

ಕುಟುಂಬದ ಫೋಟೋ ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಇಡೀ ಕುಟುಂಬ ಒಂದೇ ಕಡೆ ಸೇರಿತ್ತು. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

SCROLL FOR NEXT