ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ 
ಸಿನಿಮಾ ಸುದ್ದಿ

'ಪ್ರೀತಿಯನ್ನು ಹೇಗೆ ಕಂಡುಕೊಳ್ಳಬೇಕು' ಎಂದು ವ್ಯಾಖ್ಯಾನ ನೀಡಿದ ರಶ್ಮಿಕಾ ಮಂದಣ್ಣ: ಅಭಿಮಾನಿಯ ಪೋಸ್ಚ್ ಗೆ ಭಾವುಕ

ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಮದುವೆಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಾಕಷ್ಟು ಸುದ್ದಿ ಮಾಡಿದ್ದಾರೆ. ಈ ಮಧ್ಯೆ ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿ ಹುಡುಕಿಕೊಳ್ಳಿ’ ಎಂದು ಅವರು ಹೇಳಿದ್ದಾರೆ.

ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿ, ಇಷ್ಟು ದಿನ ನನ್ನ ಬಗ್ಗೆ ಬರೆದದ್ದನ್ನು ಓದಿ ನಾನು ಇಷ್ಟೊಂದು ಭಾವನಾತ್ಮಕವಾಗಿ ವರ್ತಿಸಿಲ್ಲ. ಹೇಳಬೇಕಾದದ್ದು ತುಂಬಾ ಇದೆ, ಆದರೆ ಹೇಳಲು ಸಾಧ್ಯವಾಗುವುದೇ ತುಂಬಾ ಕಡಿಮೆ. ನನ್ನದೇ ಆದ ಒಂದು ಜಾಗವನ್ನು ನಾನು ಹುಡುಕುತ್ತಿರುವೆ, ಆ ಪ್ರಯಾಣಕ್ಕಾಗಿ ನಾನು ತುಂಬಾ ಕೃತಜ್ಞಳಾಗಿದ್ದೇನೆ.

ಅದನ್ನು ಗುರುತಿಸಿದಕ್ಕಾಗಿ ಧನ್ಯವಾದಗಳು, ಪ್ರೀತಿಯ ಬಗ್ಗೆ ನಾನು ಹೇಳುವುದು ಇಷ್ಟೇ, ‘ನಿಮ್ಮನ್ನು ಮುಕ್ತಗೊಳಿಸುವ ಅಥವಾ ಸ್ವತಂತ್ರಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಇದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ನೀವು ಯಾರು ಎಂದು ಪ್ರಪಂಚಕ್ಕೆ ಗೊತ್ತಿಲ್ಲದ ಸಮಯದಲ್ಲಿ ನಿಮ್ಮನ್ನು ಮುಖ್ಯವಾಹಿನಿಗೆ ಕರೆತಂದು, ನಿಮ್ಮನ್ನು ಜನಪ್ರಿಯ ಗೊಳಿಸಿದವರನ್ನು ಮರೆಯಬಾರದಿತ್ತು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್