ವಿಜಯ್ ಮತ್ತು ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಇಂದು ನೀವು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ: ವಿಜಯ್ ಗೆಲುವಿಗೆ ಶಿವಣ್ಣ ಹರ್ಷ

ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು 108 ಸ್ಥಾನಗಳನ್ನು ಗೆದ್ದಿದೆ. ಈ ಮೂಲಕ ವಿಜಯ್ ಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಇದೆ. ಈ ನಡುವೆ ಶಿವಣ್ಣ ಕೂಡ ವಿಜಯ್ ಅವರ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಸರ್ಕಾರ ರಚನೆಗೆ ಮುಂದಾಗಿದೆ.

ನಟ, ರಾಜಕಾರಣಿಯಾದ ದಳಪತಿ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿಜಯ್‌ ಅವರ ಈ ಅಭೂತಪೂರ್ವ ಗೆಲುವಿಗೆ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಇದು ಅರ್ಹವಾದ ಗೆಲುವು’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು 108 ಸ್ಥಾನಗಳನ್ನು ಗೆದ್ದಿದೆ. ಈ ಮೂಲಕ ವಿಜಯ್ ಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಇದೆ. ಈ ನಡುವೆ ಶಿವಣ್ಣ ಕೂಡ ವಿಜಯ್ ಅವರ ಬಗ್ಗೆ ಮಾತನಾಡಿದ್ದಾರೆ.

ಇತರರು ನಮ್ಮ ಮೇಲೆ ತೀವ್ರವಾದ ದಾಳಿ ಮಾಡುವಾಗ ಮೌನವಾಗಿರಬೇಕು. ನಮ್ಮ ಕೆಲಸ ಅವರಿಗೆ ಉತ್ತರ ನೀಡುವುದು ಅತ್ಯಂತ ದೊಡ್ಡ ಗೆಲುವು. ಪತ್ರಿಕಾ ಸಂವಾದವೊಂದರಲ್ಲಿ ನಾನು ಟಿವಿಕೆ ಮೂಲಕ ವಿಜಯ್ ರಾಜನಾಗಲು ಹೊರಟಿದ್ದಾರೆ ಎಂದು ತಮಾಷೆಗೆ ಹೇಳಿದ್ದೆ. ಆದರೆ ಇಂದು ನೀವು (ವಿಜಯ್) ರಾಜನಂತೆ ಎತ್ತರವಾಗಿ ನಿಂತಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಜನತೆಗೆ ಅನೇಕ ಆಶ್ವಾಸನೆಗಳನ್ನು ವಿಜಯ್ ನೀಡಿದ್ದಾರೆ. ಇವುಗಳನ್ನು ಈಡೇರಿಸುವಂತೆ ಆಗಲಿ ಎಂಬುದು ಶಿವಣ್ಣನ ಹಾರೈಕೆ. ‘ತಮಿಳುನಾಡಿನ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ಶಕ್ತಿ ನಿಮಗೆ ಸಿಗಲಿ ಮತ್ತು ರಾಜ್ಯವು ಅಭಿವೃದ್ಧಿಯತ್ತ ಸಾಗಲಿ’ ಎಂದು ಶಿವಣ್ಣ ಆಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?