ನಟ ದಿಲೀಪ್ ರಾಜ್  
ಸಿನಿಮಾ ಸುದ್ದಿ

Dilip Raj Passes Away: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್​ ನಿಧನ

ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟು ಹೊತ್ತಿಗೆ ಪ್ರಾಣಪಕ್ಷಿ ಹಾರಿಹೋಗಿತ್ತು. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ದಿಲೀಪ್ ರಾಜ್ ಸಿನಿಪಯಣ

ದಿಲೀಪ್ ರಾಜ್ ಅವರ ಕನ್ನಡ ಚಿತ್ರರಂಗದ ಪಯಣ 2005ರಲ್ಲಿ ಬಿಡುಗಡೆಯಾದ ಬಾಯ್ ಫ್ರೆಂಡ್ ಚಿತ್ರದ ಮೂಲಕ ನಾಯಕ ನಟನಾಗಿ ಆರಂಭವಾಯಿತು. 2007ರಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಅಭಿನಯಿಸಿದ ಮಿಲನ ಚಿತ್ರದ ನಂತರ ಅವರಿಗೆ ಹೆಚ್ಚಿನ ಗುರುತು ಸಿಕ್ಕಿತು.

ನಂತರ ದಿಲೀಪ್ ರಾಜ್ ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ಅವರ ಇತ್ತೀಚಿನ ಚಿತ್ರವಾಗಿ ಲವ್ ಮಾಕ್ಟೇಲ್ 3 ಗಮನ ಸೆಳೆದಿದ್ದು, ಇದನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದರು. ಈ ಚಿತ್ರ ಮಾರ್ಚ್ 16ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲಿಯೂ ದಿಲೀಪ್ ರಾಜ್ ತಮ್ಮದೇ ಛಾಪು ಮೂಡಿಸಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅವರ ಅಭಿನಯ ಅವರಿಗೆ ಮನೆಮಾತಾದ ಜನಪ್ರಿಯತೆಯನ್ನು ತಂದಿತ್ತು ಮತ್ತು ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಖ್ಯಾತ ನಟರಾಗಿ ನೆಲೆಯೂರಿದ್ದರು.

‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು. ನಟ ದಿಲೀಪ್ ರಾಜ್ ಅವರ ನಿಧನ ನಂತರ ಅವರು ಇನ್‌ಸ್ಟಾಗ್ರಾಂನಲ್ಲಿ ಕೊನೆಯದಾಗಿ ಮಾಡಿದ್ದ ಪೋಸ್ಟ್‌ಗೆ ಚಿತ್ರರಂಗದ ಕಲಾವಿದರು ಮತ್ತು ಚಿತ್ರಪ್ರೇಮಿಗಳು ದುಃಖ ವ್ಯಕ್ತಪಡಿಸಿದರು. 2025ರ ಜನವರಿಯಲ್ಲಿ ಅವರು ತಮ್ಮ ಚಿತ್ರ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಪೋಸ್ಟರ್ ಹಂಚಿಕೊಂಡಿದ್ದರು. ಚಿತ್ರಕ್ಕೆ ಉತ್ತಮ ವಿಮರ್ಶೆಗಳು ದೊರೆತಿದ್ದರೂ, ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾದ ಬೆಂಬಲ: ನಮಗೆ ತಿಳಿದಿತ್ತು, ಜವಾಬ್ದಾರಿಯುತ ದೇಶಗಳು ಯೋಚಿಸಬೇಕು- MEA

ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ನಿಧನ: 38 ವರ್ಷಕ್ಕೆ ಇಹಲೋಕ ತ್ಯಜಿಸಿದ BJP ನಾಯಕಿ ಅಪರ್ಣಾ ಪತಿ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೊಡ್ಡ ಅವಮಾನ: ಬಿಡದಿ ಟೌನ್ ಶಿಪ್; ಇಡೀ ದೇಶದಲ್ಲಿ ಯಾರೂ ನಮ್ಮಂತೆ ಪರಿಹಾರ ನೀಡಿಲ್ಲ- ಡಿಕೆ ಶಿವಕುಮಾರ್

SCROLL FOR NEXT