ಗೌರ್​​​ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್ 
ಸಿನಿಮಾ ಸುದ್ದಿ

ತೆಲುಗಿನ ಪೆದ್ದಿಯಲ್ಲಿ ಶಿವಣ್ಣನ ಗೆಟಪ್ ರಿಲೀಸ್.. ಗೌರ್​​​ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್! Video

ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ 'ಪೆದ್ದಿ' ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ.

ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು‌ ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವಣ್ಣ-ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಇವರಿಬ್ಬರನ್ನು ನೋಡಿ ಥ್ರಿಲ್ ಆಗಿದ್ದಾರೆ.

ಉಪ್ಪೆನ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾಗೆ ಎ.ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ʻವೃದ್ಧಿ ಸಿನಿಮಾಸ್ʼ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ʻಮೈತ್ರಿ ಮೂವೀ ಮೇಕರ್ಸ್ʼ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್ ರತ್ನವೇಲು ಛಾಯಾಗ್ರಹಣ, ನವೀಲ್ ನೂಲಿ ಸಂಕಲನ‌ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧ: ಯುಎಇಯಲ್ಲಿ ಮೋದಿ

ಇಂಧನ ಬೆಲೆ ಏರಿಕೆ ನಡುವೆ ಯುಎಇಗೆ ಪ್ರಧಾನಿ; ಎಲ್ ಪಿಜಿ, ರಕ್ಷಣಾ ಪಾಲುದಾರಿಕೆಯಲ್ಲಿ ಮಹತ್ವದ ಒಪ್ಪಂದ

West Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!

'ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ'; ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; Video

SCROLL FOR NEXT