ನಟಿ ಚೈತ್ರಾ ಜೆ ಅಚಾರ್ 
ಸಿನಿಮಾ ಸುದ್ದಿ

ಚೈತ್ರಾ ಜೆ ಆಚಾರ್‌ಗೆ ಅಶ್ಲೀಲ ಮೆಸೇಜ್: ಪೋಸ್ಟ್ ವೈರಲ್, ಕ್ರಮಕ್ಕೆ ನಟಿ ಆಗ್ರಹ

ಪೊಲೀಸಿಂಗ್ ಮಾಡುವ ಬದಲು ಈ ವ್ಯಕ್ತಿ ಮೋರಲ್ ಪೋಲಿಸಿಂಗ್ ಮಾಡುತ್ತಿರುವಂತಿದೆ. ಅಗತ್ಯ ಕ್ರಮ ಕೈಗೊಳ್ಳಿ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಬೆಂಗಳೂರು: ಕನ್ನಡ ನಟಿ ಚೈತ್ರಾ ಜೆ ಅಚಾರ್ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿರುವ ಆರೋಪ ಕೇಳಿಬಂದಿದೆ.

ಪೊಲೀಸ್ ಸಿಬ್ಬಂದಿಯ ಫೋಟೋವನ್ನು ಪ್ರೊಫೈಲ್ ಚಿತ್ರವಾಗಿ ಬಳಸಿದ್ದ ಖಾತೆಯಿಂದ ಈ ಅವಹೇಳನಕಾರಿ ಸಂದೇಶ ಬಂದಿದ್ದು, ಈ ಬೆಳವಣಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

‘ಮಹೇಶ್ ಹೊಸಮನಿ’ (hosamani53) ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ನಟಿಗೆ ಅವಾಚ್ಯ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಆ ಖಾತೆಯಲ್ಲಿ ಪೊಲೀಸ್ ಸಿಬ್ಬಂದಿಯ ಫೋಟೋವನ್ನು ಪ್ರೊಫೈಲ್ ಪಿಕ್ಚರ್ ಆಗಿ ಬಳಸಿರುವುದು ಕಂಡು ಬಂದಿದೆ.

ಈ ಕುರಿತು ನಟಿ ಚೈತ್ರಾ ಜೆ ಆಚಾರ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸಂದೇಶದ ಸ್ಕ್ರೀನ್‌ಶಾಟ್ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು.

ಪೊಲೀಸಿಂಗ್ ಮಾಡುವ ಬದಲು ಈ ವ್ಯಕ್ತಿ ಮೋರಲ್ ಪೋಲಿಸಿಂಗ್ ಮಾಡುತ್ತಿರುವಂತಿದೆ. ಅಗತ್ಯ ಕ್ರಮ ಕೈಗೊಳ್ಳಿ, ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಈ ಪೋಸ್ಟ್ ವೈರಲ್ ಆದ ಬಳಿಕ, ಸಂದೇಶ ಕಳುಹಿಸಿದ್ದ ವ್ಯಕ್ತಿ ನಟಿಗೆ ಕ್ಷಮೆ ಕೇಳಿರುವುದಾಗಿ ತಿಳಿದುಬಂದಿದೆ.

ಬಳಿಕ ಚೈತ್ರಾ ಮತ್ತೊಂದು ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದು, ಸ್ಕ್ರೀನ್‌ಶಾಟ್'ನಲ್ಲಿ “ಇದರಿಂದ ನನ್ನ ವೃತ್ತಿಜೀವನಕ್ಕೆ ತೊಂದರೆಯಾಗಬಹುದು, ದಯವಿಟ್ಟು ಪೋಸ್ಟ್ ತೆಗೆದುಹಾಕಿ” ಎಂದು ಆತ ಮನವಿ ಮಾಡಿದ್ದಾನೆ ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನಟಿ, ನನ್ನ ವೃತ್ತಿಜೀವನದ ಬಗ್ಗೆ ಮಾತನಾಡುವಾಗ ಅವರಿಗೆ ಯಾವುದೇ ಸಮಸ್ಯೆ ಕಾಣುವುದಿಲ್ಲ. ಆದರೆ, ಅವರ ವಿಚಾರ ಬಂದಾಗ ಮಾತ್ರ ನಿಯಮಗಳು ಬದಲಾಗುತ್ತವೆಯೇ? ಎಂದು ಪ್ರಶ್ನಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ಮಹೇಶ್ ಹೊಸಮನಿ ಹೆಸರಿನ ಇನ್‌ಸ್ಟಾಗ್ರಾಂ ಖಾತೆ ಅಳಿಸಲಾಗಿದ್ದು, ನಟಿಯೂ ತಮ್ಮ ಸ್ಟೋರಿಗಳನ್ನು ತೆಗೆದುಹಾಕಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯೊಬ್ಬರು, ಇನ್ನೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

ದೂರು ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅಶ್ಲೀಲ ಸಂದೇಶ ಬಂದ ಇನ್‌ಸ್ಟಾಗ್ರಾಂ ಖಾತೆ ನಿಜವಾಗಿಯೂ ಪೊಲೀಸ್ ಸಿಬ್ಬಂದಿಯದ್ದೇ ಆಗಿತ್ತೇ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ; ಇರಾನ್

ಇರಾನ್ ಅಣ್ವಸ್ತ್ರ ಹೊಂದಬಾರದು, ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು: ಅಮೆರಿಕಾ ನಿಲುವಿಗೆ ಚೀನಾ ಸಹಮತ

ದಳಪತಿ ವಿಜಯ್ ಪ್ರಧಾನ ಮಂತ್ರಿಯಾಗುತ್ತಾರಾ? ತಮಿಳು ನಾಡು ಸಿಎಂ ರಾಜಕೀಯ ಭವಿಷ್ಯ ನುಡಿದ ಜ್ಯೋತಿಷಿ ರಾಧನ್ ಪಂಡಿತ್-Video

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ: ಡಿ ಕೆ ಶಿವಕುಮಾರ್

ದಾವಣಗೆರೆಯಲ್ಲಿ ಭಾರೀ ಮಳೆ: ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

SCROLL FOR NEXT