ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಎಂಎಸ್ ಧೋನಿ (ಸಂಗ್ರಹ ಚಿತ್ರ) 
ಕ್ರಿಕೆಟ್

ಕೂಲ್ ಕ್ಯಾಪ್ಟನ್ ನಾಯಕತ್ವಕ್ಕೆ ಗಂಗೂಲಿ ಶ್ಲಾಘನೆ

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದರಬಹುದು. ಆದರೆ ತಂಡದ ಪ್ರದರ್ಶನ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಕೋಲ್ಕತಾ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದರಬಹುದು. ಆದರೆ ತಂಡದ ಪ್ರದರ್ಶನ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಇನ್ನು ಟೀಂ ಇಂಡಿಯಾ ಮತ್ತು ನಾಯಕ ಧೋನಿಯನ್ನು ಶ್ಲಾಘಿಸುವವರ ಪಟ್ಟಿಗೆ ಇದೀಗ ಭಾರತ ಕ್ರಿಕೆಟ್ ಕಂಡ ಯಶಸ್ವೀ ನಾಯಕ ಸೌರವ್ ಗಂಗೂಲಿ ಸೇರ್ಪಡೆಯಾಗಿದ್ದು, ಟೂರ್ನಿಯಲ್ಲಿ ಧೋನಿ  ನಾಯಕತ್ವವನ್ನು ಕೊಂಡಾಡಿದ್ದಾರೆ. ‘ಟಿ–20 ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿರಬಹುದು. ಆದರೆ ನಾಯಕ ಮಹೇಂದ್ರಸಿಂಗ್‌ ದೋನಿ ಅತ್ಯುತ್ತಮವಾಗಿ  ತಂಡವನ್ನು ಮುನ್ನಡೆಸಿದರು ಎಂದು ಹೇಳಿದ್ದಾರೆ.

"ಧೋನಿ ಭಾರತ ಕಂಡ ಶ್ರೇಷ್ಠ ನಾಯಕ. ಫೈನಲ್‌ ಪಂದ್ಯದಲ್ಲಿ ಅವರ ಯೋಜನೆ ಸರಿಯಾಗಿಯೇ ಇತ್ತು. ಆದರೆ ವೆಸ್ಟ್‌ಇಂಡೀಸ್‌ ತಂಡದ ಆಟಗಾರರು ಉತ್ತಮ ಪೈಪೋಟಿ ನೀಡಿದರು. ಭಾರತ  ತಂಡ ಫೈನಲ್‌ ತಲುಪಬೇಕೆಂಬುದು ನಮ್ಮೆಲ್ಲರ ಕನಸಾಗಿತ್ತು. ಆದರೆ ಅತ್ಯುತ್ತಮ ತಂಡಗಳಾದ ವೆಸ್ಟ್ಇಂಡೀಸ್‌ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್‌ ತಲುಪಿವೆ. 193ರನ್‌ಗಳ ಬೃಹತ್  ಮೊತ್ತದ ಗುರಿ ತಲುಪಿದ ವೆಸ್ಟ್ಇಂಡೀಸ್ ತಂಡ ಫೈನಲ್‌ನಲ್ಲಿ ಆಡುವ ಅರ್ಹತೆ ಹೊಂದಿದೆ’ ಎಂದು ಪಶ್ಚಿಮ ಬಂಗಾಳದ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೂ ಕೂಡ ಆಗಿರುವ ಗಂಗೂಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT