ರಾಹುಲ್ ದ್ರಾವಿಡ್ 
ಕ್ರಿಕೆಟ್

ಸಾಮರ್ಥ್ಯವಿದ್ದರೆ ನನಗೆ ಟೀಂ ಇಂಡಿಯಾ ಕೋಚ್ ಹುದ್ದೆ ಸಿಗುತ್ತದೆ: ರಾಹುಲ್ ದ್ರಾವಿಡ್

ನನಗೆ ಸಾಮರ್ಥ್ಯ ಇದೆಯೇ ಎಂಬುದು ಟೀಂ ಇಂಡಿಯಾ ಕೋಚ್ ಆಗುವುದನ್ನು ನಿರ್ಧರಿಸುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ...

ನವದೆಹಲಿ: ನನಗೆ ಸಾಮರ್ಥ್ಯ ಇದೆಯೇ ಎಂಬುದು ಟೀಂ ಇಂಡಿಯಾ ಕೋಚ್ ಆಗುವುದನ್ನು ನಿರ್ಧರಿಸುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಭಿಪ್ರಾಯ ಪಟ್ಟಿದ್ದಾರೆ.

ಐಸಿಸಿ ಟಿ-20 ನಂತರ ಟೀಂ ಇಂಡಿಯಾ ನಿರ್ದೇಶಕರಾಗಿರುವ ರವಿಶಾಸ್ತ್ರಿ ಅವರ ಅವಧಿ ಅಂತ್ಯವಾಗಲಿದ್ದು , ಟೀ ಇಂಡಿಯಾ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಹೆಸರು ಕೇಳಿಬರುತ್ತಿದೆ. ಆದರೆ ಇದೂವರೆಗೂ ದ್ರಾವಿಡ್ ತಮ್ಮ ಅಂತಿಮ ನಿಲುವೇನು ಎಂಬುದನ್ನು ಪ್ರಕಟಿಸಿಲ್ಲ.
ಭಾರತದ ಹಿರಿಯರ ಕ್ರಿಕೆಟ್ ತಂಡದ ತರಬೇತುದಾರರಾಗಲು ತಾವು ಸಿದ್ದರಿದ್ದೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ನನಗೆ ಟೀಂ ಇಂಡಿಯಾ ಕೋಚ್ ಆಗುವ ಅರ್ಹತೆ ಇದ್ದರೇ ಆ ಹುದ್ದೆ ಸಿಗುತ್ತದೆ ಎಂದು ಹೇಳಿದರು.

ದ್ರಾವಿಡ್ ಸದ್ಯ ಅಂಡರ್ -19 ಭಾರತೀಯ ತಂಡದ ತರಬೇತುದಾರರಾಗಿದ್ದು, ಡೆಲ್ಲಿ ಡೇರ್ ಡೆವಿಲ್ ತಂಡಕ್ಕೂ ಕೋಚ್ ಆಗಿದ್ದಾರೆ. ನಾನು ಯಾವುದೇ ನಿರ್ಧಾರವನ್ನು ಕೈಗೊಳ್ಳಬೇಕಿದ್ದರೂ ಹಲವು ಬಾರಿ ಯೋಚಿಸಿ, ಪರಿಶೀಲನೆ ನಡೆಸಿದ ನಂತರವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜೊತೆಗೆ ಹಲವು ವಿಷಯಗಳನ್ನು ಪರಿಗಣೆನೆಗೆ ತೆಗೆದುಕೊಂಡು ಪರಾಮರ್ಶಿಸುವುದಾಗಿ ದ್ರಾವಿಡ್ ಹೇಳಿದ್ದಾರೆ.

ನಾವು ತೆಗೆದುಕೊಂಡ ನಿರ್ಧಾರದಿಂದ ಉತ್ತಮ ಫಲಿತಾಂಶ ಬರುತ್ತದೋ ಬಿಡುತ್ತದೋ ಅದು ನಗಣ್ಯ. ಆದರೆ ಒಂದು ಬಾರಿ ಕಮಿಟ್ ಮೆಂಟ್ ಮಾಡಿಕೊಂಡರೇ ಅದಕ್ಕೆ ಕಠಿಣ ಪರಿಶ್ರಮ ಹಾಕುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ನಾನು ಕಲಿಯುವುದು ಇನ್ನೂ ಇದೆ. ಪ್ರತಿದಿನ ನಾನು ಹೊಸತನ್ನು ಕಲಿಯುತ್ತಾ ಇದ್ದೇನೆ ಎಂದು ಹೇಳಿದ್ದಾರೆ. ತಾವು ತರಬೇತು ನೀಡುತ್ತಿರುವ 19 ವರ್ಷ ಕೆಳಗಿನ ಕ್ರಿಕೆಟ್ ತಂಡ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಸೋಲು ಅನುಭವಿಸಿದ್ದನ್ನು ದ್ರಾವಿಡ್ ಸ್ಮರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT