ಬಾಂಬೆ ಹೈಕೋರ್ಟ್ 
ಕ್ರಿಕೆಟ್

ಐಪಿಎಲ್ ರಾಜ್ಯದಿಂದ ಸ್ಥಳಾಂತರಿಸುವ ಬಗ್ಗೆ ಚಿಂತಿಸಿ: ಬಿಸಿಸಿಐಗೆ ಬಾಂಬೆ ಹೈಕೋರ್ಟ್

ಮಹಾರಾಷ್ಟ್ರದಲ್ಲಿ ನೀರಿಗೆ ಬರ ಇದ್ದು, ಐಪಿಎಲ್ ಪಂದ್ಯವನ್ನು ರಾಜ್ಯದಿಂದ ಸ್ಥಳಾಂತರಿಸುವ ವಿಚಾರವನ್ನು ಪರಿಗಣಿಸುವಂತೆ ಬಾಂಬೆ ಹೈಕೋರ್ಟ್....

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿಗೆ ಬರ ಇದ್ದು, ಐಪಿಎಲ್ ಪಂದ್ಯವನ್ನು ರಾಜ್ಯದಿಂದ ಸ್ಥಳಾಂತರಿಸುವ ವಿಚಾರವನ್ನು ಪರಿಗಣಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸೂಚಿಸಿದೆ.
ಐಪಿಎಲ್ ಸ್ಥಳಾಂತರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಬರ ಪೀಡಿತ ಪ್ರದೇಶಕ್ಕೆ ಬಳಕೆಯಾಗಿದ್ದ 40 ಲಕ್ಷ ಲೀಟರ್ ನೀರನ್ನು ಒದಗಿಸಲು ಬಿಸಿಸಿಐಗೆ ಸಾಧ್ಯವೇ ಎಂದು ಪ್ರಶ್ನಿಸಿತು. ಅಲ್ಲದೆ ಮುಖ್ಯಮಂತ್ರಿ ಬರ ಪರಿಹಾರ ನಿಧಿಗೆ ಬಿಸಿಸಿಐ ಎಷ್ಟು ದೇಣಿಗೆ ನೀಡಿದೆ ಎಂದು ಪ್ರಶ್ನಿಸಿತು. ಅಂತಿಮವಾಗಿ ಕೆಲವು ಪಂದ್ಯಗಳನ್ನು ಪುಣೆ ಮತ್ತು ಮುಂಬೈಯಿಂದ ಸ್ಥಳಾಂತರಿಸುವಂತೆ ಬಿಸಿಸಿಐಗೆ ಕೋರ್ಟ್ ಸೂಚಿಸಿತು.
ಇದಕ್ಕು ಮುನ್ನ ಮುಂಬೈ ಮತ್ತು ಪುಣೆಗಳಲ್ಲಿ ನಡೆಯುವ 17 ಐಪಿಎಲ್ ಪಂದ್ಯಗಳಿಗೆ ಮೈದಾನದ ಪಿಚ್ ನಿರ್ವಹಣೆಗೆ ಶುದ್ಧೀಕರಿಸಿದ ಚರಂಡಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು ಬಿಸಿಸಿಐ ಕೋರ್ಟ್ ಗೆ ತಿಳಿಸಿತ್ತು.
ಮಹಾರಾಷ್ಟ್ರದಲ್ಲಿ ಜನರು ತೀವ್ರ ಬರಗಾಲ ಎದುರಿಸುತ್ತಿರುವಾಗ ಐಪಿಎಲ್ ಆಟಕ್ಕಾಗಿ ಕ್ರಿಕೆಟ್ ಪಿಚ್ ಗಳ ನಿರ್ವಹಣೆಗೆಂದು ಪ್ರತಿದಿನ ಲಕ್ಷಾಂತರ ಲೀಟರ್ ನೀರನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಪ್ರಜಾಸತ್ತೆ ಸುಧಾರಣೆ ಲೋಕಸತ್ತ ಮೂವ್ ಮೆಂಟ್ ಮತ್ತು ಫೌಂಡೇಶನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅಲ್ಲದೆ ಐಪಿಎಲ್ ಪಂದ್ಯವನ್ನು ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT