ಬಾಂಬೆ ಹೈಕೋರ್ಟ್ 
ಕ್ರಿಕೆಟ್

ಐಪಿಎಲ್ ರಾಜ್ಯದಿಂದ ಸ್ಥಳಾಂತರಿಸುವ ಬಗ್ಗೆ ಚಿಂತಿಸಿ: ಬಿಸಿಸಿಐಗೆ ಬಾಂಬೆ ಹೈಕೋರ್ಟ್

ಮಹಾರಾಷ್ಟ್ರದಲ್ಲಿ ನೀರಿಗೆ ಬರ ಇದ್ದು, ಐಪಿಎಲ್ ಪಂದ್ಯವನ್ನು ರಾಜ್ಯದಿಂದ ಸ್ಥಳಾಂತರಿಸುವ ವಿಚಾರವನ್ನು ಪರಿಗಣಿಸುವಂತೆ ಬಾಂಬೆ ಹೈಕೋರ್ಟ್....

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿಗೆ ಬರ ಇದ್ದು, ಐಪಿಎಲ್ ಪಂದ್ಯವನ್ನು ರಾಜ್ಯದಿಂದ ಸ್ಥಳಾಂತರಿಸುವ ವಿಚಾರವನ್ನು ಪರಿಗಣಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸೂಚಿಸಿದೆ.
ಐಪಿಎಲ್ ಸ್ಥಳಾಂತರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಬರ ಪೀಡಿತ ಪ್ರದೇಶಕ್ಕೆ ಬಳಕೆಯಾಗಿದ್ದ 40 ಲಕ್ಷ ಲೀಟರ್ ನೀರನ್ನು ಒದಗಿಸಲು ಬಿಸಿಸಿಐಗೆ ಸಾಧ್ಯವೇ ಎಂದು ಪ್ರಶ್ನಿಸಿತು. ಅಲ್ಲದೆ ಮುಖ್ಯಮಂತ್ರಿ ಬರ ಪರಿಹಾರ ನಿಧಿಗೆ ಬಿಸಿಸಿಐ ಎಷ್ಟು ದೇಣಿಗೆ ನೀಡಿದೆ ಎಂದು ಪ್ರಶ್ನಿಸಿತು. ಅಂತಿಮವಾಗಿ ಕೆಲವು ಪಂದ್ಯಗಳನ್ನು ಪುಣೆ ಮತ್ತು ಮುಂಬೈಯಿಂದ ಸ್ಥಳಾಂತರಿಸುವಂತೆ ಬಿಸಿಸಿಐಗೆ ಕೋರ್ಟ್ ಸೂಚಿಸಿತು.
ಇದಕ್ಕು ಮುನ್ನ ಮುಂಬೈ ಮತ್ತು ಪುಣೆಗಳಲ್ಲಿ ನಡೆಯುವ 17 ಐಪಿಎಲ್ ಪಂದ್ಯಗಳಿಗೆ ಮೈದಾನದ ಪಿಚ್ ನಿರ್ವಹಣೆಗೆ ಶುದ್ಧೀಕರಿಸಿದ ಚರಂಡಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು ಬಿಸಿಸಿಐ ಕೋರ್ಟ್ ಗೆ ತಿಳಿಸಿತ್ತು.
ಮಹಾರಾಷ್ಟ್ರದಲ್ಲಿ ಜನರು ತೀವ್ರ ಬರಗಾಲ ಎದುರಿಸುತ್ತಿರುವಾಗ ಐಪಿಎಲ್ ಆಟಕ್ಕಾಗಿ ಕ್ರಿಕೆಟ್ ಪಿಚ್ ಗಳ ನಿರ್ವಹಣೆಗೆಂದು ಪ್ರತಿದಿನ ಲಕ್ಷಾಂತರ ಲೀಟರ್ ನೀರನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಪ್ರಜಾಸತ್ತೆ ಸುಧಾರಣೆ ಲೋಕಸತ್ತ ಮೂವ್ ಮೆಂಟ್ ಮತ್ತು ಫೌಂಡೇಶನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅಲ್ಲದೆ ಐಪಿಎಲ್ ಪಂದ್ಯವನ್ನು ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT