ಅಮಿತ್ ಮಿಶ್ರಾ ಬೌಲಿಂಗ್ ಕ್ಷಣ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರಿಕೆಟ್

ಐಪಿಎಲ್-9: ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ದೆಹಲಿ ಗೆ ಭರ್ಜರಿ ಜಯ

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ದೆಹಲಿ ಡೇರ್ ಡೆವಿಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ..

ನವದೆಹಲಿ: ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ದೆಹಲಿ ಡೇರ್ ಡೆವಿಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತ್ ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಮಿತ್ ಮಿಶ್ರಾ ಅವರ ಮಾರಕ ಬೌಲಿಂಗ್ ಗೆ ತತ್ತರಿಸಿ ಹೋಯಿತು. ಆರಂಭಿಕ ಆಟಗಾರ ವ್ಹೋರಾ (32 ರನ್) ಅವರನ್ನು  ಹೊರತು ಪಡಿಸಿದರೆ ಕಿಂಗ್ಸ್ ಇಲೆವೆನ್ ನ ಇನ್ನಾವುದೇ ಆಟಗಾರ ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರು ಪ್ರಯತ್ನ ಮಾಡಲಿಲ್ಲ. ಪರಿಣಾಮ ಪಂಜಾಬ್ ತಂಡ ನಿಗದಿತ 20 ಓರ್ ಗಳಲ್ಲಿ 9 ವಿಕೆಟ್  ಕಳೆದುಕೊಂಡು ಕೇವಲ 111 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.

ದೆಹಲಿ ಪರ ಅಮಿತ್ ಮಿಶ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರೆ, ಜಹೀರ್ ಖಾನ್, ಮಾರಿಸ್ ಮತ್ತು ಯಾದವ್ ತಲಾ 1 ವಿಕೆಟ್ ಪಡೆದರು.

ಪಂಜಾಬ್ ನೀಡಿದ 111 ರನ್ ಗಳ ಅಲ್ಪಮೊತ್ತವನ್ನು ಬೆನ್ನುಹತ್ತಿದ ದೆಹಲಿ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಇನ್ನಿಂಗ್ಸ್ ನ 3ನೇ ಓವರ್ ನಲ್ಲಿಯೇ ಎಸ್ ಎಸ್ ಐಯ್ಯರ್ ಔಟ್ ಆಗುವ  ಮೂಲಕ ದೆಹಲಿ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ಆದರೆ ಈ ಹಂತದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಡಿಕಾಕ್ ಉತ್ತಮ ಆರಂಭ ಒದಗಿಸಿಕೊಟ್ಟರು. ಸ್ಯಾಮ್ಸನ್ ಜೊತೆಗೂಡಿದ  ಡಿಕಾಕ್ 42 ಎಸೆತಗಳನ್ನು ಎದುರಿಸಿ ಅಜೇಯ 59 ರನ್ ಸಿಡಿಸಿದರು.

ಸ್ಯಾಮಸನ್ ಕೂಡ 32 ಎಸೆತಗಳಲ್ಲಿ 33 ರನ್ ಗಳಿಸುವ ಮೂಲಕ ಕಾಕ್ ಗೆ ಉತ್ತಮ ಸಾಥ್ ನೀಡಿದರು. ಇನ್ನೇನು ದೆಹಲಿ ಪಂದ್ಯ ಗೆದ್ದೇ ಬಿಟ್ಟಿತು ಎನ್ನು ಸಂದರ್ಭದಲ್ಲಿ ಸ್ಯಾಮ್ಸನ್ ಪಟೇಲ್ ಗೆ  ವಿಕೆಟ್ ಒಪ್ಪಿಸಿದರು. ನಂತರ ಬಂದ ನೇಗಿ ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು.

ಪಂಜಾಬ್ ವಿರುದ್ಧ ಉತ್ತಮ ಬೌಲಿಂಗ್ ಮಾಡಿದ ಮಿಶ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT