ಐಪಿಎಲ್ 9: ಆರ್ ಸಿಬಿ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಜಯ 
ಕ್ರಿಕೆಟ್

ಐಪಿಎಲ್ 9: ಆರ್ ಸಿಬಿ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್- ದೆಹಲಿ ಡೇರ್ ಡೆವಿಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳ ಜಯಗಳಿಸಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್- ದೆಹಲಿ ಡೇರ್ ಡೆವಿಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳ ಜಯಗಳಿಸಿದೆ. 
ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ನೀಡಿದ್ದ 191 ರನ್ ಗಳ ಗುರಿಯನ್ನು ಬೆನ್ನಟ್ಟಿದ ದೆಹಲಿ ಡೇರ್ ಡೆವಿಲ್ಸ್ ತಂಡ ಆರಂಭಿಕ ಓವರ್ ನಲ್ಲೇ ವಿಕೆಟ್ ಕಳೆದುಕೊಂಡಿತಾದರೂ ನಂತರದ ಓವರ್ ಗಳಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿತು.  ದೊಡ್ಡ ಹೊಡೆತಕ್ಕೆ ಯತ್ನಿಸಿ ಸ್ಯಾಮ್ಸನ್  ಆರ್ ಸಿಬಿ ತಂಡದ ಚಾಹಲ್‌ ಗೆ ಕ್ಯಾಚಿತ್ತು ಔಟ್ ಆದರು. 
18ನೇ ಓವರ್ ವರೆಗೂ ಜೊತೆಯಾಟ ಆಡಿದ ಕ್ವಿಂಟನ್‌ ಡಿ ಕಾಕ್‌- ಕರುಣ್ ನಾಯರ್ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು. ನಂತರ ಕ್ರೀಸ್ ಗೆ ಬಂದ ಜೆ.ಪಿ ಡುಮಿನಿ  ಕರುಣ್ ನಾಯರ್ ಅವರೊಂದಿಗೆ ಸೇರಿ ತಂಡವನ್ನು ಗೆಲುವಿನ ದಡ ಸೇರಿಸಿದರು. 
ಆರ್ ಸಿಬಿ ಪರ ಬೌಲರ್ ಶ್ರೀನಾಥ್ ಅರವಿಂದ್ 32 ರನ್ ನೀಡಿ ಒಂದು ವಿಕೆಟ್ ಪಡೆದರೆ ಪರ್ವೇಜ್ ರಸೂಲ್ 28 ರನ್ ನೀಡಿದರು. ದೆಹಲಿ ಡೇರ್ ಡೆವಿಲ್ಸ್ ಪರ  ಕ್ವಿಂಟನ್‌ ಡಿ ಕಾಕ್‌ 51 ಎಸೆತಗಳಲ್ಲಿ 108 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT