ಮುಂಬೈ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರೋಹಿತ್ ಶರ್ಮಾ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರಿಕೆಟ್

ಮುಂಬೈ ವಿರುದ್ಧ ಮತ್ತೆ ಮುಗ್ಗರಿಸಿದ ಆರ್ ಸಿಬಿ

ರೋಹಿತ್ ಶರ್ಮಾ ಅವರ ಅಮೋಘ ಅರ್ಧಶತಕ ಹಾಗೂ ಕೊನೆಯ ಹಂತದಲ್ಲಿ ಸಿಡಿದ ಕೀರನ್ ಪೊಲಾರ್ಡ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳ ಭರ್ಜರಿ ಜಯಸಾಧಿಸಿತು..

ಮುಂಬೈ: ರೋಹಿತ್ ಶರ್ಮಾ ಅವರ ಅಮೋಘ ಅರ್ಧಶತಕ ಹಾಗೂ ಕೊನೆಯ ಹಂತದಲ್ಲಿ ಸಿಡಿದ ಕೀರನ್ ಪೊಲಾರ್ಡ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳ ಭರ್ಜರಿ ಜಯಸಾಧಿಸಿತು.

ಆರ್ ಸಿಬಿ ನೀಡಿದ 171ರನ್ ಗಳ ಸವಾಲಿನ ಗುರಿಯನ್ನು ಬೆನ್ನುಹತ್ತಿದ ಮುಂಬೈಗೆ ಆರಂಭಿಕ ಆಘಾತದ ನಡುವೆಯೂ ನಾಯಕ ರೋಹಿತ್ ಶರ್ಮಾ ಆಸರೆಯಾಗಿ ನಿಂತರು. ಅಂಬಾಟಿ ರಾಯುಡು ಜೊತೆಗೂಡಿದ ರೋಹಿತ್ ಭರ್ಜರಿ ಅರ್ಧಶತಕದ ಜೊತೆಯಾಟವಾಡಿ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು. ಈ ನಡುವೆ ನಿಧಾನಗತಿಯ ಆರಂಭಕಂಡರೂ ಬಳಿಕ ಆಟಕ್ಕೆ ಕುದುರಿಕೊಂಡ ರೋಹಿತ್ ಶರ್ಮಾ ನೋಡ ನೋಡುತ್ತಿದ್ದಂತೆಯೇ ಭರ್ಜರಿ ಬೌಂಡರಿ ಹಾಗೂ ಸಿಕ್ಸರ್ ಗಳ ಮೂಲಕ ಅರ್ಧಶತಕ ಸಿಡಿಸಿದರು. ಒಟ್ಟು 44 ಎಸೆತಗಳನ್ನು ಎದುರಿಸಿದ ರೋಹಿತ್ ಬರೊಬ್ಬರಿ 62 ರನ್ ಸಿಡಿಸಿ ತಂಡವನ್ನು ಬಹುತೇಕ ಗೆಲುವಿನ ಸನಿಹಕ್ಕೆ ತಂದು ನಿಲ್ಲಿಸಿದ್ದರು. ಆದರೆ ಬಳಿಕ ಇಕ್ಬಾಲ್ ಅಬ್ದುಲ್ಲಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

ಬಳಿಕ ಬಂದ  ಜೋಸ್ ಬಟ್ಲರ್ (28 ರನ್) ಮತ್ತು ಕೀರನ್ ಪೊಲ್ಲಾರ್ಡ್ (ಅಜೇಯ 40 ರನ್) ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಮುಂಬೈ ತಂಡಕ್ಕೆ 6 ವಿಕೆಟ್ ಗಳ ಅಂತರದ ಭರ್ಜರಿ ಜಯತಂದಿತ್ತರು. ಇದಕ್ಕೂ ಮೊದಲು ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿತು. ನಾಯಕ ವಿರಾಟ್ ಕೊಹ್ಲಿಯೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಆರ್ ಸಿಬಿ ಗೆ ಉತ್ತಮ ಆರಂಭ ನೀಡಿದರು. ವಿರಾಟ್‌ ಕೊಹ್ಲಿ 33 ರನ್ ಗಳಿಸಿದರೆ, ಟ್ರಾವಿಸ್ ಹೆಡ್ 37 ರನ್, ಎ.ಬಿ. ಡಿವಿಲಿಯರ್ಸ್ 29 ರನ್, ಸರ್ಫರಾಜ್‌ ಖಾನ್‌ 28 ರನ್ ಮತ್ತು ಲೋಕೇಶ್‌ ರಾಹುಲ್‌ 23 ರನ್‌ ಕಲೆಹಾಕುವ ಮೂಲಕ ಅರ್ ಸಿಬಿಯ ಸವಾಲಿನ ಮೊತ್ತಕ್ಕೆ ಕಾರಣರಾದರು.

ಮುಂಬೈ ಪರ ಬುಮ್ರಾಹ್ 3 ವಿಕೆಟ್ ಪಡೆದರೆ, ಪಾಂಡ್ಯಾ 2 ಮತ್ತು ಮೆಕ್ ಲೀನಿಘನ್ 1 ವಿಕೆಟ್ ಪಡೆದರು. ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈಗೆ ಆರ್ ಸಿಬಿ ವಿರುದ್ಧದ ಈ ಪಂದ್ಯ ನಿರ್ಣಾಯಕವಾಗಿತ್ತು.

ಆಕರ್ಷಕ ಅರ್ಧ ಶತಕದ ಮೂಲಕ ಮುಂಬೈ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ನಾಯಕ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT