ಭಾರತ 
ಕ್ರಿಕೆಟ್

ಬಿಸಿಸಿಐ ಎಡವಟ್ಟು; ತಂಡದಲ್ಲಿ ಸ್ಥಾನ ಕಳೆದುಕೊಂಡ 7 ಕಿರಿಯ ಆಟಗಾರರು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಎಡವಟ್ಟಿನಿಂದ 19 ವಯೋಮಿತಿಯೊಳಗಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದ 7 ಕಿರಿಯ...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಎಡವಟ್ಟಿನಿಂದ 19 ವಯೋಮಿತಿಯೊಳಗಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದ 7 ಕಿರಿಯ ಆಟಗಾರರು ಇದೀಗ ತಂಡದಿಂದ ಹೊರಬಿದ್ದಿದ್ದಾರೆ. 
ಏಷ್ಯಾ ಕ್ರಿಕೆಟ್ ಸಮಿತಿ ಕಳೆದ ವರ್ಷ ಬಿಸಿಸಿಐಗೆ 1-9-1998ರ ನಂತರ ಹುಟ್ಟಿದವರನ್ನು ಏಷ್ಯಾಕಪ್ ಗೆ ಆಯ್ಕೆ ಮಾಡುವಂತೆ ಸೂಚಿಸಿತ್ತು. ಆದರೆ ಈ ಬಗ್ಗೆ ತಪ್ಪು ತಿಳುವಳಿಕೆ ಹೊಂದಿದ್ದ ಬಿಸಿಸಿಐ 1997ನೇ ಇಸವಿಯನ್ನು ಆಯ್ಕೆಗೆ ಗಡವನ್ನಾಗಿ ಪರಿಗಣಿಸಿ 15 ಮಂದಿಯ ತಂಡವನ್ನು ತಿಂಗಳ ಹಿಂದೆಯೇ ಪ್ರಕಟಿಸಿತ್ತು. ಇದೀಗ ತನ್ನ ತಪ್ಪಿನ ಅರಿವಾಗಿ ಬಿಸಿಸಿಐ 7 ಕಿರಿಯ ಆಟಗಾರರಿಗೆ ಕೊಕ್ ಕೊಟ್ಟಿದ್ದು ಬದಲಿ ಆಟಗಾರರನ್ನು ಪ್ರಕಟಿಸಿದೆ. 
ಏಷ್ಯಾಕಪ್ ಟೂರ್ನಿ ಡಿಸೆಂಬರ್ 13ರಿಂದ ಶ್ರೀಲಂಕಾದಲ್ಲಿ ನಡೆಯಲಿದ್ದು ತಂಡದಲ್ಲಿ ಸ್ಥಾನ ಪಡೆದಿದ್ದ ಖುಷಿಯಲ್ಲಿ ಲಂಕಾಕ್ಕೆ ತೆರಳಲು ವೀಸಾಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದ ಆಟಗಾರರು ನಿರಾಸೆಗೊಳಗಾಗಿದ್ದಾರೆ. 
ತಂಡದಿಂದ ಆಡುವ ಅವಕಾಶ ಕಳೆದುಕೊಂಡ ಆಟಗಾರರು
ಸಂದೀಪ್ ತೋಮಾರ್, ದಿಗ್ವಿಜಯ್ ರಂಗಿ, ಡೆರಿಲ್ ಎಸ್ ಫೆರಾರಿಯೋ, ರಿಷಬ್ ಭಗತ್, ಸಿಮರ್ಜಿತ್ ಸಿಂಗ್, ಇಜಾನ್ ಸಯೇದ್, ಚಂದನ್ ಸಾಹಿನಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT