ವಿರಾಟ್ ಕೊಹ್ಲಿ 
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ಕೊಹ್ಲಿ ಉತ್ಸುಕ

ಸ್ವದೇಶದಲ್ಲಿ ರನ್ ಹೊಳೆ ಹರಿಸುತ್ತಿರುವ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕರೆ 2018ರ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ...

ಚೆನ್ನೈ: ಸ್ವದೇಶದಲ್ಲಿ ರನ್ ಹೊಳೆ ಹರಿಸುತ್ತಿರುವ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕರೆ 2018ರ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ ಕ್ರಿಕೆಟ್ ನಲ್ಲಿ ಆಡುವ ಉತ್ಸಾಹ ವ್ಯಕ್ತಪಡಿಸಿದ್ದಾರೆ.
ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದೆ. ಇನ್ನು ಸೋಲಿನ ಹತಾಶೆಯಲ್ಲಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಕೊಹ್ಲಿ ಇಂಗ್ಲೆಂಡ್ ಪಿಚ್ ನಲ್ಲಿ ಆಡಲು ಪರದಾಡುತ್ತಾರೆ ಎಂದು ಹೇಳಿದ್ದರು. ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಕೊಹ್ಲಿ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅವಕಾಶ ಸಿಕ್ಕರೆ ಇಂಗ್ಲೆಂಡ್ ಕ್ಲಬ್ ಕ್ರಿಕೆಟ್ ನಲ್ಲಿ ಆಡುತ್ತೇನೆ ಎಂದು ಹೇಳಿದ್ದಾರೆ. 
ಈ ಹಿಂದೆ ಹಲವು ಭಾರತೀಯ ಕ್ರಿಕೆಟಿಗರು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ಕ್ಲಬ್ ತಂಡಗಳ ಪರವಾಗಿ ಆಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಭಾರತದಲ್ಲೇ ಸಾಕಷ್ಟು ಅವಕಾಶಗಳಿರುವುದರಿಂದ ಯಾವ ಆಟಗಾರರೂ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ಆಸಕ್ತಿ ತೋರುತ್ತಿಲ್ಲ ಎಂದರು. 
2014ರ ಇಂಗ್ಲೆಂಡ್ ಪ್ರವಾಸದಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ 13.40 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರು. ಆಗ ಅವರು ಗಳಿಸಿದ್ದ ಗರಿಷ್ಠ ರನ್ 39 ಆಗಿತ್ತು. ಆದರೆ ಇದೀಗ ಭಾರತದ ನೆಲದಲ್ಲಿ 128 ಸರಾಸರಿಯಲ್ಲಿ ಬ್ಯಾಟ್ ಬೀಸುತ್ತಿದ್ದು 235 ರನ್ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 
ಐಪಿಎಲ್ ಮುಕ್ತಾಯದ ನಂತರ ಕೊಹ್ಲಿ ವೇಳಾಪಟ್ಟಿ ಸರಿ ಹೊಂದಿದರೆ ಕೌಂಟಿ ಕ್ರಿಕೆಟ್ ನಲ್ಲಿ ಆಡುವುದಾಗಿ ಹೇಳಿಕೊಂಡಿದ್ದಾರೆ. 2018ರ ಇಂಗ್ಲೆಂಡ್ ಪ್ರವಾಸ ಕೊಹ್ಲಿಗೆ ಪ್ರತಿಷ್ಠೆಯ ಕಣವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT