ಕ್ರಿಕೆಟಿಗ ಪ್ರಣವ್ ಧನವಾಡೆ (ಸಂಗ್ರಹ ಚಿತ್ರ) 
ಕ್ರಿಕೆಟ್

ಮೈದಾನದಲ್ಲಿ ತರಬೇತಿ ಮಾಡುತ್ತಿದ್ದ ದಾಖಲೆ ವೀರ ಕ್ರಿಕೆಟಿಗ ಧನವಾಡೆ ಮೇಲೆ ಹಲ್ಲೆ ಮಾಡಿದ ಪೊಲೀಸ್!

ಒಂದೇ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 1009 ರನ್ ಗಳನ್ನು ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ ಯುವ ಕ್ರಿಕೆಟಿಗ ಪ್ರಣವ್ ಧನವಾಡೆ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಮುಂಬೈ: ಒಂದೇ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 1009 ರನ್ ಗಳನ್ನು ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ ಯುವ ಕ್ರಿಕೆಟಿಗ ಪ್ರಣವ್ ಧನವಾಡೆ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಕಲ್ಯಾಣ್ ನಲ್ಲಿರುವ ಸುಭಾಷ್ ಮೈದಾನದಲ್ಲಿ ಶನಿವಾರ ಸಂಜೆ ಕ್ರಿಕೆಟ್ ತರಬೇತಿ ನಡೆಸುತ್ತಿದ್ದ ಕ್ರಿಕೆಟಿಗ ಪ್ರಣವ್ ಧನವಾಣೆ ಹಾಗೂ ಆತನ ತಂದೆ ಮೇಲೆ ಪೊಲೀಸರು ಹಲ್ಲೆ ಮಾಡಿ ಸುಳ್ಳು  ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ ಸುಭಾಷ್ ಮೈದಾನದಲ್ಲಿ ಶನಿವಾರ ಸಂಜೆ ಸುಮಾರು 6.30ರ ವೇಳೆಯಲ್ಲಿ ಪ್ರಣವ್ ಧನವಾಡೆ ತರಬೇತಿ ನಡೆಸುತ್ತಿದ್ದರು. ಆಗ ಅಲ್ಲಿಗೆ  ಬಂದ ಪೊಲೀಸರು ಕೇಂದ್ರ ಸಚಿವರು ಇಲ್ಲಿಗೆ  ಆಗಮಿಸುತ್ತಾರೆ ಕೂಡಲೇ ಮೈದಾನ ಖಾಲಿ ಮಾಡುವಂತೆ ಧನವಾಡೆ ಮತ್ತು ಅವರ ತಂದೆಗೆ ಸೂಚನೆ ನೀಡಿದ್ದಾರೆ. ಆಗ ಧನವಾಡೆ ತಾನು ತರಬೇತಿ ನಡೆಸುತ್ತಿದ್ದು ಇನ್ನು ಐದು ನಿಮಿಷದಲ್ಲಿ ತಾವು ಹೊರಡುವುದಾಗಿ ಹೇಳಿದ್ದಾರೆ.  ಆದರೆ ಧನವಾಡೆ ಮಾತನ್ನು ಕೇಳದ ಮಪ್ತಿಯಲ್ಲಿದ್ದ ಪೊಲೀಸ್ ಅಧಿಕಾರಿ ಕಡಮ್ ಏಕಾಏಕಿ ಧನವಾಡೆ ಕಪಾಳಕ್ಕೆ ಭಾರಿಸಿದ್ದಾರೆ. ಪ್ರಣವ್ ಧನವಾಡೆಯ ದಾಖಲೆ ಕುರಿತು ಮಾಹಿತಿ ಇದ್ದ ಸಬ್ ಇನ್ಸ್ ಪೆಕ್ಟರ್ ಕಡಮ್ ಮೈದಾನ ಬಿಟ್ಟು  ಹೋಗದಿದ್ದರೆ ಇಬ್ಬರ ಮೇಲೂ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಪೊಲೀಸ್ ನಡವಳಿಕೆಯನ್ನು ವಿರೋಧಿಸಿದ ಧನವಾಡೆ ತಂದೆ ಅದಕ್ಕೆ ಪ್ರತಿರೋಧ ತೋರಿದ್ದಾರೆ. ಇದರಿಂದ ಮತ್ತಷ್ಟು ಕುಪಿತನಾದ ಪೊಲೀಸ್ ಇಬ್ಬರನ್ನೂ ಜೀಪಿನಲ್ಲಿದ್ದ ಹಿರಿಯ ಅಧಿಕಾರಿಯ ಬಳಿ ಕರೆದೊಯ್ದಿದ್ದಾರೆ. ಬಳಿಕ  ಠಾಣೆಗೆ ಕರೆದುಕೊಂಡು ಬಾ ಅವರಿಗೆ ಸರಿಯಾದ ಪಾಠ ಕಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ಠಾಣೆಯಲ್ಲಿದ್ದ ಇನ್ಸ್ ಪೆಕ್ಟರ್ ಸೂರ್ಯವಂಶಿ ಅಧಿಕಾರಿ ಕೂಡ ಪ್ರಣವ್ ಹಾಗೂ ಅವರ ತಂದೆಯನ್ನು ನಿಂದಿಸಿದ್ದಾರೆ.

ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಅತ್ತ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೆ ಕ್ರಿಕೆಟಿಗ ಪ್ರಣವ್ ಹಾಗೂ ಅವರ ತಂದೆ ಪರವಾಗಿ  ನಿಂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಟ್ಟಾರೆ ಸಚಿವರ ಹೆಲಿಕಾಪ್ಟರ್ ಇಳಿಸಲು ಪ್ರತಿಭಾವಂತ ಕ್ರಿಕೆಟಿಗನ ತರಬೇತಿಗೆ ಅಡ್ಡಿಪಡಿಸಿದ ಪೊಲೀಸರ ಕ್ರಮ ಇದೀಗ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT