ಕ್ರಿಕೆಟಿಗ ಪ್ರಣವ್ ಧನವಾಡೆ (ಸಂಗ್ರಹ ಚಿತ್ರ) 
ಕ್ರಿಕೆಟ್

ಮೈದಾನದಲ್ಲಿ ತರಬೇತಿ ಮಾಡುತ್ತಿದ್ದ ದಾಖಲೆ ವೀರ ಕ್ರಿಕೆಟಿಗ ಧನವಾಡೆ ಮೇಲೆ ಹಲ್ಲೆ ಮಾಡಿದ ಪೊಲೀಸ್!

ಒಂದೇ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 1009 ರನ್ ಗಳನ್ನು ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ ಯುವ ಕ್ರಿಕೆಟಿಗ ಪ್ರಣವ್ ಧನವಾಡೆ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಮುಂಬೈ: ಒಂದೇ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 1009 ರನ್ ಗಳನ್ನು ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ ಯುವ ಕ್ರಿಕೆಟಿಗ ಪ್ರಣವ್ ಧನವಾಡೆ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಕಲ್ಯಾಣ್ ನಲ್ಲಿರುವ ಸುಭಾಷ್ ಮೈದಾನದಲ್ಲಿ ಶನಿವಾರ ಸಂಜೆ ಕ್ರಿಕೆಟ್ ತರಬೇತಿ ನಡೆಸುತ್ತಿದ್ದ ಕ್ರಿಕೆಟಿಗ ಪ್ರಣವ್ ಧನವಾಣೆ ಹಾಗೂ ಆತನ ತಂದೆ ಮೇಲೆ ಪೊಲೀಸರು ಹಲ್ಲೆ ಮಾಡಿ ಸುಳ್ಳು  ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ ಸುಭಾಷ್ ಮೈದಾನದಲ್ಲಿ ಶನಿವಾರ ಸಂಜೆ ಸುಮಾರು 6.30ರ ವೇಳೆಯಲ್ಲಿ ಪ್ರಣವ್ ಧನವಾಡೆ ತರಬೇತಿ ನಡೆಸುತ್ತಿದ್ದರು. ಆಗ ಅಲ್ಲಿಗೆ  ಬಂದ ಪೊಲೀಸರು ಕೇಂದ್ರ ಸಚಿವರು ಇಲ್ಲಿಗೆ  ಆಗಮಿಸುತ್ತಾರೆ ಕೂಡಲೇ ಮೈದಾನ ಖಾಲಿ ಮಾಡುವಂತೆ ಧನವಾಡೆ ಮತ್ತು ಅವರ ತಂದೆಗೆ ಸೂಚನೆ ನೀಡಿದ್ದಾರೆ. ಆಗ ಧನವಾಡೆ ತಾನು ತರಬೇತಿ ನಡೆಸುತ್ತಿದ್ದು ಇನ್ನು ಐದು ನಿಮಿಷದಲ್ಲಿ ತಾವು ಹೊರಡುವುದಾಗಿ ಹೇಳಿದ್ದಾರೆ.  ಆದರೆ ಧನವಾಡೆ ಮಾತನ್ನು ಕೇಳದ ಮಪ್ತಿಯಲ್ಲಿದ್ದ ಪೊಲೀಸ್ ಅಧಿಕಾರಿ ಕಡಮ್ ಏಕಾಏಕಿ ಧನವಾಡೆ ಕಪಾಳಕ್ಕೆ ಭಾರಿಸಿದ್ದಾರೆ. ಪ್ರಣವ್ ಧನವಾಡೆಯ ದಾಖಲೆ ಕುರಿತು ಮಾಹಿತಿ ಇದ್ದ ಸಬ್ ಇನ್ಸ್ ಪೆಕ್ಟರ್ ಕಡಮ್ ಮೈದಾನ ಬಿಟ್ಟು  ಹೋಗದಿದ್ದರೆ ಇಬ್ಬರ ಮೇಲೂ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಪೊಲೀಸ್ ನಡವಳಿಕೆಯನ್ನು ವಿರೋಧಿಸಿದ ಧನವಾಡೆ ತಂದೆ ಅದಕ್ಕೆ ಪ್ರತಿರೋಧ ತೋರಿದ್ದಾರೆ. ಇದರಿಂದ ಮತ್ತಷ್ಟು ಕುಪಿತನಾದ ಪೊಲೀಸ್ ಇಬ್ಬರನ್ನೂ ಜೀಪಿನಲ್ಲಿದ್ದ ಹಿರಿಯ ಅಧಿಕಾರಿಯ ಬಳಿ ಕರೆದೊಯ್ದಿದ್ದಾರೆ. ಬಳಿಕ  ಠಾಣೆಗೆ ಕರೆದುಕೊಂಡು ಬಾ ಅವರಿಗೆ ಸರಿಯಾದ ಪಾಠ ಕಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ಠಾಣೆಯಲ್ಲಿದ್ದ ಇನ್ಸ್ ಪೆಕ್ಟರ್ ಸೂರ್ಯವಂಶಿ ಅಧಿಕಾರಿ ಕೂಡ ಪ್ರಣವ್ ಹಾಗೂ ಅವರ ತಂದೆಯನ್ನು ನಿಂದಿಸಿದ್ದಾರೆ.

ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಅತ್ತ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೆ ಕ್ರಿಕೆಟಿಗ ಪ್ರಣವ್ ಹಾಗೂ ಅವರ ತಂದೆ ಪರವಾಗಿ  ನಿಂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಟ್ಟಾರೆ ಸಚಿವರ ಹೆಲಿಕಾಪ್ಟರ್ ಇಳಿಸಲು ಪ್ರತಿಭಾವಂತ ಕ್ರಿಕೆಟಿಗನ ತರಬೇತಿಗೆ ಅಡ್ಡಿಪಡಿಸಿದ ಪೊಲೀಸರ ಕ್ರಮ ಇದೀಗ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT