ವಿರೇಂದ್ರ ಸೆಹ್ವಾಗ್ ಟ್ವೀಟ್ 
ಕ್ರಿಕೆಟ್

ತ್ರಿಶತಕ ಕ್ಲಬ್ ಗೆ ಸ್ವಾಗತ, 12 ವರ್ಷಗಳ ಒಂಟಿತನ ಕೊನೆಗಾಣಿಸಿದೆ ಕರುಣ್ : ಸೆಹ್ವಾಗ್

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಸಿಡಿಸಿದ ಕರುಣ್ ನಾಯರ್ ಗೆ ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರದಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರುಣ್ ನಾಯರ್ ಗೆ ತ್ರಿಶತಕ ಕ್ಲಬ್ ಗೆ ಸ್ವಾಗತ ಕೋರಿದ್ದಾರೆ.

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಸಿಡಿಸಿದ ಕರುಣ್ ನಾಯರ್ ಗೆ ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರದಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರುಣ್ ನಾಯರ್ ಗೆ ತ್ರಿಶತಕ ಕ್ಲಬ್ ಗೆ ಸ್ವಾಗತ ಕೋರಿದ್ದಾರೆ. 
ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ರನ್ ದಾಖಲಿಸಿರುವ ಏಕೈಕ ಆಟಗಾರ ವಿರೇಂದ್ರ ಸೆಹ್ವಾಗ್  ತ್ರಿಶತಕ ಸಿಡಿಸಿರುವ ಎರಡನೇ ಆಟಗಾರ ಕರುಣ್ ನಾಯರ್ ಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದು, ತ್ರಿಶತಕ ಕ್ಲಬ್ ಗೆ ಸ್ವಾಗತ ಕೋರಿದ್ದಾರೆ. 
ಎಂದಿನಂತೆಯೇ ವಿನೂತನ ರೀತಿಯಲ್ಲಿ ಟ್ವೀಟ್ ಮಾಡಿರುವ ವಿರೇಂದ್ರ ಸೆಹ್ವಾಗ್, "12 ವರ್ಷಗಳಿಂದ ತ್ರಿಶತಕದ ಕ್ಲಬ್ ನಲ್ಲಿ ಒಂಟಿತನ ಕಾಡುತ್ತಿತ್ತು. ಆದರೆ ಈಗ ತ್ರಿಶತಕ ದಾಖಲಿಸಿದ ಕರುಣ್ ಜೊತೆಗಾರನಾಗಿದ್ದಾರೆ. ಮಜಾ ಬಂತು". ಎಂದು ಟ್ವೀಟ್ ಮಾಡಿದ್ದಾರೆ. ಕರುಣ್ ನಾಯರ್ ತ್ರಿಶತಕ ದಾಖಲಿಸುವುದಕ್ಕೂ 12 ವರ್ಷಗಳ ಹಿಂದೆ ವಿರೇಂದ್ರ ಸೆಹ್ವಾಗ್ ಟೆಸ್ಟ್ ನಲ್ಲಿ ತ್ರಿಶತಕ ದಾಖಲಿಸಿದ್ದ ಏಕೈಕ ಆಟಗಾರರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!