ವಿರಾಟ್ ಕೊಹ್ಲಿ 
ಕ್ರಿಕೆಟ್

ಸ್ವದೇಶ ಅಥವಾ ವಿದೇಶವಾಗಲಿ ಸರಣಿ ಗೆಲುವಿಗೆ ನಮ್ಮ ಆದ್ಯತೆ: ವಿರಾಟ್ ಕೊಹ್ಲಿ

ಸ್ವದೇಶ ಅಥವಾ ವಿದೇಶ ನೆಲವಾಗಲಿ ಸರಣಿ ಗೆಲುವಿಗೆ ನಮ್ಮ ಆದ್ಯತೆ ಎಂದು ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ...

ಬೆಂಗಳೂರು: ಸ್ವದೇಶ ಅಥವಾ ವಿದೇಶ ನೆಲವಾಗಲಿ ಸರಣಿ ಗೆಲುವಿಗೆ ನಮ್ಮ ಆದ್ಯತೆ ಎಂದು ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸ ಹಿನ್ನೆಲೆ ಬೆಂಗಳೂರಿನಲ್ಲಿ ಜಂಟಿ ಟೀಂ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ, ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ನೆಲದಲ್ಲಿ ಆಡುವಾಗ ಬ್ಯಾಟ್ಸ್ ಮನಗಳು ತಾಳ್ಮೆ ಕಳೆದುಕೊಳ್ಳದೆ ಸಮಚಿತ್ತದಿಂದ ಆಡಬೇಕಿದೆ ಎಂದರು.

ಟೆಸ್ಟ್ ಕ್ರಿಕೆಟ್ ನಲ್ಲಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತದೆ ಎನ್ನವ ನಂಬಿಕೆ ಇದೆ. ನಾವು ಟೆಸ್ಟ್ ಕ್ರಿಕೆಟ್ ಹೇಗೆ ಆಡುತ್ತೀವಿ ಎನ್ನುವುದನ್ನು ಮುಂದಿನ ಆರು ತಿಂಗಳಲ್ಲಿ ಸಾಬೀತುಪಡಿಸುತ್ತೇವೆ ಎಂದರು.

ಇದೇ ವೇಳೆ ಮಾತನಾಡಿದ ಅನಿಲ್ ಕುಂಬ್ಳೆ, ನಾಯಕ ವಿರಾಟ್ ಕೊಹ್ಲಿಯಲ್ಲಿರುವ ಉತ್ಸಾಹವನ್ನು ತುಂಬ ಇಷ್ಟಪಡುತ್ತೇನೆ. ನಾನೂ ಕೂಡ ಅಷ್ಟೇ ಉತ್ಸಾಹದಿಂದ ಇರಲು ಇಷ್ಟಪಡುತ್ತೇನೆ. ತಂಡದಲ್ಲಿರುವ ಕೆಲ ಆಟಗಾರರಿಗೆ ವೆಸ್ಟ್ ಇಂಡೀಸ್ ನೆಲದಲ್ಲಿ ಆಡಿದ ಅನುಭವವಿದ್ದು, ಮೊದಲ ಬಾರಿಗೆ ಆಡಲಿರುವ ಆಟಗಾರರಿಗೆ ನಮ್ಮ ಅನುಭವ ಸಹಕಾರಿಯಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT