ಮೆಕ್ಕಲಂ ಮತ್ತು ಐಸಿಸಿ ಭ್ರಷ್ಟಾಚಾರ ದಳದ ಮಾಜಿ ಮುಖ್ಯಸ್ಥ ರವಿ ಸಾವನಿ (ಸಂಗ್ರಹ ಚಿತ್ರ) 
ಕ್ರಿಕೆಟ್

ಮೆಕ್ಕಲಮ್ ಆರೋಪದಲ್ಲಿ ಹುರುಳಿಲ್ಲ; ನನ್ನ ಕರ್ತವ್ಯ ನಿಭಾಯಿಸಿದ್ದೇನೆ: ರವಿ ಸಾವನಿ

2008ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡನ್ ಮೆಕ್ಕಲಂ ಸಿಡಿಸಿದ್ದ ಫಿಕ್ಸಿಂಗ್ ಆರೋಪದಲ್ಲಿ ಹುರುಳಿಲ್ಲ ಎಂದು ಐಸಿಸಿಯ ಭ್ರಷ್ಟಾಚಾರ ನಿಗ್ರಹದಳದ ಮಾಜಿ ಮುಖ್ಯಸ್ಥ ರವಿ ಸಾವನಿ ಹೇಳಿದ್ದಾರೆ.

ನವದೆಹಲಿ: 2008ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡನ್ ಮೆಕ್ಕಲಂ ಸಿಡಿಸಿದ್ದ ಫಿಕ್ಸಿಂಗ್ ಆರೋಪದಲ್ಲಿ ಹುರುಳಿಲ್ಲ ಎಂದು  ಐಸಿಸಿಯ ಭ್ರಷ್ಟಾಚಾರ ನಿಗ್ರಹದಳದ ಮಾಜಿ ಮುಖ್ಯಸ್ಥ ರವಿ ಸಾವನಿ ಹೇಳಿದ್ದಾರೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಮೆಕ್ಕಲಂ ಆರೋಪಿಸಿರುವಂತೆ ಏನೂ ಇಲ್ಲ. ಕ್ರಿಸ್ ಕೇರ್ನ್ಸ್ ರನ್ನು ಬುಕ್ಕಿಯೊಬ್ಬ ಸಂಪರ್ಕಿಸಿದ ಕುರಿತು ಮೆಕ್ಕಲಂ ಮಾಹಿತಿ ನೀಡುತ್ತಿದ್ದಂತೆಯೇ  ತಾವು ಅದನ್ನು ಐಸಿಸಿ ಗಮನಕ್ಕೆ ತಂದಿದ್ದೇನೆ. ಇದರಲ್ಲಿ ಯಾವುದೇ ವಿಳಂಬ ಮಾಡಿಲ್ಲ. ನನ್ನ ಕರ್ತವ್ಯವನ್ನು ನಾನು ಚಾಚೂ ತಪ್ಪದೇ ಮಾಡಿದ್ದೇನೆ ಎಂದು ರವಿ ಸಾವನಿ ಹೇಳಿದ್ದಾರೆ.

ಇತ್ತೀಚೆಗೆ ಲಂಡನ್ ನಲ್ಲಿ ನಡೆದ ‘ಎಂಸಿಸಿ ಸ್ಪಿರಿಟ್‌ ಆಫ್‌ ಕ್ರಿಕೆಟ್‌’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಮೆಕ್ಕಲಂ "2008ರ ಚೊಚ್ಚಲ  ಐಪಿಎಲ್‌ ಟೂರ್ನಿಯ ವೇಳೆ ಮತ್ತು ನಮ್ಮ ತಂಡ ಇಂಗ್ಲೆಂಡ್‌ ಪ್ರವಾಸ ಕೈಗೊಂಡಾಗ ನಮ್ಮದೇ ತಂಡದ ಆಟಗಾರ ಕ್ರಿಸ್‌  ಕೇರ್ನ್ಸ್‌ ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗುವಂತೆ ಸಂಪರ್ಕಿಸಿದ್ದರು.  ಈ ವಿಷಯವನ್ನು ಐಸಿಸಿಯ ಭ್ರಷ್ಟಾಚಾರ ನಿಗ್ರಹ ತಡೆ ಘಟಕಕ್ಕೆ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ. ಗಂಭೀರ ವಿಚಾರವನ್ನು ವಿಶ್ವ ಕ್ರಿಕೆಟ್ ಮಂಡಳಿ ಲಘುವಾಗಿ ಪರಿಗಣಿಸಿತು" ಎಂದು  ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?

Hit And Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ