ಗೆಲುವಿನ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಏಕದಿನ ಪಂದ್ಯ: ಸರಣಿ ಕ್ಲೀನ್ ಸ್ವೀಪ್ ಮಾಡಿದ ಯಂಗ್ ಇಂಡಿಯಾ

ಮೊದಲ ಎರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದ್ದ ಟೀಂ ಇಂಡಿಯಾ ಬುಧವಾರ ಜಿ೦ಬಾಬ್ವೆ ವಿರುದ್ಧ ನಡೆದ ಮೂರನೇ ಹಾಗೂ...

ಹರಾರೆ: ಮೊದಲ ಎರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದ್ದ ಟೀಂ ಇಂಡಿಯಾ ಬುಧವಾರ ಜಿ೦ಬಾಬ್ವೆ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಇಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಭಾರತದ ಯುವ ವೇಗಿ ಜಸ್ಪ್ರೀಸ್ ಬುಮ್ರಾ (4) ದಾಳಿಗೆ ತತ್ತರಿಸಿದ ಜಿಂಬಾಬ್ವೆ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 123ರನ್​ಗಳಿಸುವ ಮೂಲಕ ಭಾರತಕ್ಕೆ 124 ರನ್ ಗಳ ಅಲ್ಪ ಮೊತ್ತದ ಸವಾಲು ನೀಡಿತ್ತು.

ಜಿಂಬಾಬ್ವೆ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 21.5 ಓವರ್ ಗಳಲ್ಲಿ 126 ರನ್ ಗಳಿಸುವ ಮೂಲಕ ಮೂರನೇ ಬಾರಿ ಸರಣಿಯನ್ನು ತನ್ನದಾಗಿಸಿಕೊಂಡಿತು. ಈ ಹಿಂದೆ 2013ರ ಪ್ರವಾಸದ ಏಕದಿನ ಸರಣಿಯನ್ನು 5-0 ಹಾಗೂ 2015ರ ಸರಣಿಯನ್ನು ಭಾರತ 3-0 ಅಂತರದಿಂದ ಗೆದ್ದುಕೊ೦ಡಿದೆ. ಈ ಪಂದ್ಯವನ್ನೂ ಗೆಲ್ಲುವ ಮೂಲಕ ಭಾರತ ಸತತ ಹ್ಯಾಟ್ರಿಕ್ ಕ್ಲೀನ್ ಸ್ವೀಪ್ ಮಾಡಿದ ದಾಖಲೆ ಬರೆದಿದೆ.

ಆರಂಭಿಕ ಆಟಗಾರ ಕೆ.ಎಲ್ ರಾಹುಲ್(ಔಟಾಗದೆ 63) ಹಾಗೂ ಫಿಯಾಜ್ ಫಜಲ್(ಔಟಾಗದೆ 55) ಅಜೇಯ ಅರ್ಧಶಕದ ನೆರವಿನಿಂದ ಭಾರತ ಜಿಂಬಾಬ್ವೆ ವಿರುದ್ಧ ಹತ್ತು ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ, ಆರಂಭಿಕ ಬ್ಯಾಟ್ಸ್​ಮನ್ ಹ್ಯಾಮಿಲ್ಟನ್ ಮಸಕಜ (08) ವಿಕೆಟ್ ಪಡೆಯುವ ಮೂಲಕ ಧವಳ್ ಕುಲಕರ್ಣಿ ಆರಂಭಿಕ ಬ್ರೇಕ್ ನೀಡಿದರು. ಜಿಂಬಾಬ್ವೆ ಪರ ಹುಸಿ ಸಿಂಬಾಂಡ ಗಳಿಸಿದ 38 ರನ್ ವಯಕ್ತಿಕ ಗರಿಷ್ಠ ಮೊತ್ತವಾಗಿದೆ. ಭಾರತೀಯ ಬೌಲರ್​ಗಳ ಕರಾರುವಕ್ ಬೌಲಿಂಗ್ ದಾಳಿಗೆ ಜಿಂಬಾಬ್ವೆ ಯಾವ ಆಟಗಾರರು ಪ್ರತಿರೋಧ ತೋರುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಜಿಂಬಾಬ್ವೆ 42.2 ಓವರ್​ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 123 ರನ್​ಗಳಿಸಿತು.

ಭಾರತದ ಪರ ಜಸ್ಪ್ರೀಸ್ ಬುಮ್ರಾ 4 ಹಾಗೂ ಚಾಹಲ್ 2 ವಿಕೆಟ್ ಪಡೆದು ಗಮನ ಸೇಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT