ರಾಹುಲ್ ದ್ರಾವಿಡ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಆಡಲು ಒಮ್ಮೆ ಮಾತ್ರ ಅವಕಾಶ; ಬಿಸಿಸಿಐ ನಿರ್ಧಾರಕ್ಕೆ ದ್ರಾವಿಡ್ ಸ್ವಾಗತ

ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ...

ನವದೆಹಲಿ: ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು  ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ.

ಈ ಹಿಂದೆ ಬಿಸಿಸಿಐ ಅಂಡರ್ 19 ಕ್ರಿಕೆಟ್ ಆಟಗಾರರ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕಲೆಂದು 2 ಸೀಸನಲ್ಲಿ ಮತ್ತು ಒಮ್ಮೆ ಮಾತ್ರ ಕಿರಿಯರ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ನಿರ್ಧಾರ  ಕೈಗೊಂಡಿತ್ತು. ಈ ನಿರ್ಧಾರಕ್ಕೆ ಬೆಂಬಲ ನೀಡಿರುವ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿನ ಈ ಕ್ರಮದಿಂದ ವಯೋಮಾನ ಮೋಸದ ಪ್ರಕರಣಗಳು ತಗ್ಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಇಂಥಹ ನಿರ್ಧಾರದಿಂದ ವಯೋಮಿತಿಯ ಸಂಘರ್ಷ ತಪ್ಪುತ್ತದೆ. ಜತೆಗೆ ಪಕ್ಷಪಾತ ರಹಿತ ಆಟ ಉಳಿಯತ್ತದೆ. ಫಲಿತಾಂಶದ ಮೇಲೆ ಹೆಚ್ಚು ನಿಗಾ ಇಡಬಹುದು. ವಯೋಮಿತಿ ಪ್ರಮಾಣಪತ್ರದ  ಗೊಂದಲದಿಂದಲೇ ಸಾಕಷ್ಟು ಉತ್ತಮ ಕ್ರಿಕೆಟಿಗರನ್ನು ಕಳೆದುಕೊಂಡಿದ್ದೇವೆ. ಜತೆಗೆ ಜನನ ಪ್ರಮಾಣಪತ್ರ ಸಲ್ಲಿಸುವ ವಿಷಯದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕು" ಎಂದು ದ್ರಾವಿಡ್  ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಕೇವಲ ಸರಣಿ ಗೆಲುವಿನ ಮೇಲಷ್ಟೇ ಕೇಂದ್ರವಾಗಿರುವುದಕ್ಕಿಂತ ಆಟಗಾರರ ಸಾಮರ್ಥ್ಯ ಹೆಚ್ಚಿಸುವ ಮತ್ತು ಉತ್ತಮ ಆಟವಾಡುವ ಕುರಿತು ಗಮನ ಕೇಂದ್ರೀಕರಿಸಬೇಕು. ಭವಿಷ್ಯದ  ಉತ್ತಮ ಕ್ರಿಕೆಟಿಗರನ್ನು ರೂಪಿಸುವ ನಿಟ್ಟಿನಲ್ಲಿ ಗೆಲುವಿಗಿಂತ ಉತ್ತಮ ಆಟವೇ ಮುಖ್ಯ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT