ರಾಹುಲ್ ದ್ರಾವಿಡ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಆಡಲು ಒಮ್ಮೆ ಮಾತ್ರ ಅವಕಾಶ; ಬಿಸಿಸಿಐ ನಿರ್ಧಾರಕ್ಕೆ ದ್ರಾವಿಡ್ ಸ್ವಾಗತ

ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ...

ನವದೆಹಲಿ: ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು  ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ.

ಈ ಹಿಂದೆ ಬಿಸಿಸಿಐ ಅಂಡರ್ 19 ಕ್ರಿಕೆಟ್ ಆಟಗಾರರ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕಲೆಂದು 2 ಸೀಸನಲ್ಲಿ ಮತ್ತು ಒಮ್ಮೆ ಮಾತ್ರ ಕಿರಿಯರ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ನಿರ್ಧಾರ  ಕೈಗೊಂಡಿತ್ತು. ಈ ನಿರ್ಧಾರಕ್ಕೆ ಬೆಂಬಲ ನೀಡಿರುವ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿನ ಈ ಕ್ರಮದಿಂದ ವಯೋಮಾನ ಮೋಸದ ಪ್ರಕರಣಗಳು ತಗ್ಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಇಂಥಹ ನಿರ್ಧಾರದಿಂದ ವಯೋಮಿತಿಯ ಸಂಘರ್ಷ ತಪ್ಪುತ್ತದೆ. ಜತೆಗೆ ಪಕ್ಷಪಾತ ರಹಿತ ಆಟ ಉಳಿಯತ್ತದೆ. ಫಲಿತಾಂಶದ ಮೇಲೆ ಹೆಚ್ಚು ನಿಗಾ ಇಡಬಹುದು. ವಯೋಮಿತಿ ಪ್ರಮಾಣಪತ್ರದ  ಗೊಂದಲದಿಂದಲೇ ಸಾಕಷ್ಟು ಉತ್ತಮ ಕ್ರಿಕೆಟಿಗರನ್ನು ಕಳೆದುಕೊಂಡಿದ್ದೇವೆ. ಜತೆಗೆ ಜನನ ಪ್ರಮಾಣಪತ್ರ ಸಲ್ಲಿಸುವ ವಿಷಯದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕು" ಎಂದು ದ್ರಾವಿಡ್  ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಕೇವಲ ಸರಣಿ ಗೆಲುವಿನ ಮೇಲಷ್ಟೇ ಕೇಂದ್ರವಾಗಿರುವುದಕ್ಕಿಂತ ಆಟಗಾರರ ಸಾಮರ್ಥ್ಯ ಹೆಚ್ಚಿಸುವ ಮತ್ತು ಉತ್ತಮ ಆಟವಾಡುವ ಕುರಿತು ಗಮನ ಕೇಂದ್ರೀಕರಿಸಬೇಕು. ಭವಿಷ್ಯದ  ಉತ್ತಮ ಕ್ರಿಕೆಟಿಗರನ್ನು ರೂಪಿಸುವ ನಿಟ್ಟಿನಲ್ಲಿ ಗೆಲುವಿಗಿಂತ ಉತ್ತಮ ಆಟವೇ ಮುಖ್ಯ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

SCROLL FOR NEXT