ಕ್ರಿಕೆಟ್

ಟಿ20 ವಿಶ್ವಕಪ್: ಬಾಂಗ್ಲಾಗೆ 147 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು...

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 147 ರನ್ ಗಳ ಟಾರ್ಗೆಟ್ ನೀಡಿದೆ. 
ಟಾಸ್ ಗೆದ್ದು ಬಾಂಗ್ಲಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲ ಬ್ಯಾಟ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ನಿಗದಿತ ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146ರನ್ ಗಳನ್ನು ಸೇರಿಸಿತು. 
ಆರಂಭದಲ್ಲಿ ರಕ್ಷಣಾತ್ಮಕ ಆಟವಾಡಿದ ರೋಹಿತ್ ಶರ್ಮಾ(18) ಹಾಗೂ ಶಿಖರ್ ಧವನ್ (23) ಬಾಂಗ್ಲಾ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಿದರು. ನಂತರ ಬಂದ ವಿರಾಟ್ ಕೋಹ್ಲಿ 24ರನ್, ಸುರೇಶ್ ರೈನಾ 30ರನ್, ಹಾರ್ದಿಕ್ ಪಾಂಡೆ 15ರನ್ ಹಾಗೂ ಯುವರಾಜ್ ಸಿಂಗ್ ಕೇವಲ 3ರನ್ ಗಳಿಸಿ ಔಟಾದರು.
ಭಾರತದ ಪಾಲಿಗೆ ಈ ಪಂದ್ಯ ಮಹತ್ವದಾಗಿದ್ದು, ಟೀಂ ಇಂಡಿಯಾ ಉತ್ತಮ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ಬಾಂಗ್ಲಾದೇಶವನ್ನು ಸಮರ್ಥವಾಗಿ ಎದುರಿಸಿ ಜಯ ಸಾಧಿಸಿದಲ್ಲಿ ಸೆಮಿಫೈನಲ್ ಪ್ರವೇಶಕ್ಕೆ ಹಾದಿ ಸುಗಮವಾಗಲಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಟಿ20 ವಿಶ್ವಕಪ್​ನ ತನ್ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಳಿಕ ಒತ್ತಡ ಅನುಭವಿಸಿದ್ದ ಟೀಂ ಇಂಡಿಯಾ. ಪಾಕಿಸ್ತಾನ ವಿರುದ್ಧ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಹೈ ವೋಲ್ಟೆಜ್ ಪಂದ್ಯದಲ್ಲಿ ಮಣಿಸಿ ವಿಶ್ವಕಪ್ ಅಭಿಯಾನ ಜೀವಂತವಾಗಿಸಿಕೊಂಡಿತ್ತು. ಇಂದಿನ ಪಂದ್ಯದಲ್ಲಿ ರನ್​ರೇಟ್​ ಅನ್ನು ಹೆಚ್ಚಳ ಮಾಡಿಕೊಳ್ಳುವುದರೊಂದಿಗೆ ಭರ್ಜರಿ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಭದ್ರ ಪಡಿಸಿಕೊಳ್ಳಬೇಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು