ಯುವರಾಜ್ ಸಿಂಗ್ 
ಕ್ರಿಕೆಟ್

ವಿಶ್ವಕಪ್ ಟಿ20ಯಿಂದ ಹೊರಬಿದ್ದ ಯುವಿ, ಕನ್ನಡಿಗ ಮನಿಷ್ ಪಾಂಡೆಗೆ ಸ್ಥಾನ

ಕಳೆದ ಭಾನುವಾರ ರಾತ್ರಿ ಮೊಹಾಲಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಗುರಿಯಾಗಿ ಗಾಯಗೊಂಡಿದ್ದ...

ನವದೆಹಲಿ: ಕಳೆದ ಭಾನುವಾರ ರಾತ್ರಿ ಮೊಹಾಲಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಗುರಿಯಾಗಿ ಗಾಯಗೊಂಡಿದ್ದ ಭಾರತ ತಂಡದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಅವರು ವಿಶ್ವಕಪ್ ಟಿ20ಯಿಂದ ಹೊರಬಿದಿದ್ದು, ಅವರ ಸ್ಥಾನಕ್ಕೆ ಕನ್ನಡಿಗ ಮನಿಷ್ ಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಯುವರಾಜ್ ಸಿಂಗ್ ಅವರನ್ನು ನಾಳೆ ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಸೆಮಿ ಫೈನಲ್ ಪಂದ್ಯದಿಂದ ಕೈಬಿಡಲಾಗಿದ್ದು, ಅವರ ಬದಲು ಕರ್ನಾಟಕದ ಸ್ಫೋಟಕ ಬ್ಯಾಟ್ಸ್‌ಮನ್ ಮನಿಷ್ ಪಾಂಡೆ ಅವರಿಗೆ ಸ್ಥಾನ ನೀಡಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ವ್ಯವಸ್ಥಾಪಕ ರವಿಶಾಸ್ತ್ರಿ ಅವರು, ಸೆಮಿಫೈನಲ್ ನಲ್ಲಿ ಯುವರಾಜ್ ಸಿಂಗ್ ಅವರ ಕೊರತೆ ನಮ್ಮನ್ನು ಕಾಡಲಿದೆ ಎಂದು ಹೇಳಿದ್ದಾರೆ.
ಆಸಿಸ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ 5 ರನ್‌ಗಳಿಸಿದ್ದ ವೇಳೆ ಗಾಯಗೊಂಡಿದ್ದರು. ಇದರ ನಡುವೆಯೂ ಯುವರಾಜ್ ಕೆಲಕಾಲ ಬ್ಯಾಟಿಂಗ್ ನಡೆಸಿದ್ದರು. 
ಆಸ್ಟ್ರೇಲಿಯಾ ಪ್ರವಾಸದ ವೇಳೆ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದ ಪಾಂಡೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರಮುಖ ಆಕಾಂಕ್ಷಿಯಾಗಿದ್ದರು. ಐಪಿಎಲ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಶ್ರೆಯಕ್ಕೂ ಈ ಹಿಂದೆ ಪಾಂಡೆ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT